About the Author

ಕಥೆಗಾರ ಕಂನಾಡಿಗಾ ನಾರಾಯಣ ಅವರದು ಕನ್ನಡ ಕಥನ ಪರಂಪರೆಯಲ್ಲಿ ಒಂದು ವಿಶಿಷ್ಟ ಸಂವೇದನೆ. ಪ್ರಾಣಿಲೋಕದೊಳಗಿನ ಮನುಷ್ಯ ಜಗತ್ತು. ಮನುಷ್ಯನೊಳಗಿರುವ ಮೃಗಲೋಕ ಎರಡರ ತಾಕಲಾಟಗಳನ್ನೂ ಒಂದು ಹದದಲ್ಲಿ ಹಿಡಿಯುವ ಇವರ ಕತೆಗಳು ಹೊಸ ಜಗತ್ತೊಂದನ್ನು ತೆರೆದಿಡುತ್ತವೆ. ಹಾಗೆಂದು ಇವೆರಡೇ ಇವರ ಆಸಕ್ತಿಯ ವಿಷಯವಲ್ಲ. ಸಮಾಜದಲ್ಲಿ ಬೇರೆ ಬೇರೆ ಸಂದರ್ಭಗಳಲ್ಲಿ ತಮ್ಮದಲ್ಲದ ತಪ್ಪಿಗೆ ಸಂದಿಗ್ಧತೆಯನ್ನು ಅನುಭವಿಸುವ ಅನೇಕ ಬಗೆಯ ಜನರ ನೋವುಗಳನ್ನು ಸೂಕ್ಷ್ಮವಾಗಿ ನಾರಾಯಣ ಅವರು ಹಿಡಿದಿಡುತ್ತಾರೆ. ಇಂತಹ ಮನುಷ್ಯ ವೇದನೆಯ ಕತೆಗಳನ್ನು ಕಡೆಯುವಾಗ ಕೊಂಚ ಜನಪ್ರಿಯ ದಾರಿಯನ್ನು ಹಿಡಿಯುವ ನಾರಾಯಣ ಅವರ ಕಥೆಗಳು ಪ್ರಾಣಿಗಳ ಲೋಕದ ತಾಕಲಾಟಗಳನ್ನು ಕಾಣಿಸಹೊರಟಾಗ ವೈಶಿಷ್ಟಪೂರ್ಣವಾದ ತಾದಾತ್ಮ್ಯವನ್ನು ಸಾಧಿಸುತ್ತವೆ. ಅವರ ಕೃತಿಗಳು. ಅಲ್ಲಾ ಭಕ್ಷಿ ಮತ್ತು ಅವನ ನಾಯಿ, ಹಂದಿಗೋಡು, ಆನೆಗೊಂದಿ, ಹುಲಿವೇಷ ಇತ್ಯಾದಿ.

ಕಂನಾಡಿಗಾ ನಾರಾಯಣ

BY THE AUTHOR