About the Author

ಕವಿ ಕಿರಣ್ ಸಿಡ್ಲೇಹಳ್ಳಿ ಮೂಲತಃ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಸಿಡ್ಲೇಹಳ್ಳಿಯವರು. ರತ್ನಕಂದ -ಇವರ ಕಾವ್ಯನಾಮ. ತಂದೆ ಸಿದ್ಧಲಿಂಗಯ್ಯ ತಾಯಿ  ರತ್ನಮ್ಮ. ಕಿರಣ್ ಅವರು ಎಂ.ಎ,ಬಿ.ಇಡಿ, ಪದವೀಧರರು. ಕಳೆದ 4 ವರ್ಷಗಳಿಂದ ಕ್ಲಸ್ಟರ್ ಸಂಪನ್ಮೂಲ ಸಂಯೋಜಕರಾಗಿದ್ದಾರೆ. ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯದ ವಿವಿಧೆಡೆ ಶಿಕ್ಷಕರಿಗೆ ತರಬೇತಿ ನೀಡಿದ್ದಾರೆ. ಶ್ರಿ ಮುತ್ತುಸ್ವಾಮಿ ಅವರ ಪ್ರೇರಣೆ ಹಾಗೂ ಮಾರ್ಗದರ್ಶನದಲ್ಲಿ ಮುಕ್ತಕಗಳ ರಚನೆ ಮಾಡಿದ್ದಾರೆ.  ಪ್ರಸ್ತುತ ರಾಜ್ಯ ಮುಕ್ತಕ ಕವಿ ಪರಿಷತ್ತಿನ ಕಾರ್ಯದರ್ಶಿಯಾಗಿದ್ದಾರೆ. ಸಾವಿರಕ್ಕೂ ಹೆಚ್ಚು ಮುಕ್ತಕಗಳನ್ನು ವಿವಿಧ ಛಂದೋನಿಯಮದಲ್ಲಿ ರಚಿಸಿದ್ದಾರೆ.

ಕೃತಿಗಳು: .ಮುಕ್ತಕ ಸುಧೆ (ಮುಕ್ತಕಗಳ ಸಂಕಲನ) ,ಭಾವಕಿರಣ,ನಂಬುಗೆಯ ಕೊಡ 

ಪ್ರಶಸ್ತಿ-ಗೌರವಗಳು: ಭಾರತ್ ಸ್ಕೌಟ್ ನಿಂದ 1997 ರಲ್ಲಿ ರಾಜ್ಯಪುರಸ್ಕಾರ, 999 ರಲ್ಲಿ ಪ್ರತಿಷ್ಠಿತ ರಾಷ್ಟ್ರಪತಿ ಪುರಸ್ಕಾರ, 2020 ನೇ ಸಾಲಿನಲ್ಲಿ ಲಯನ್ಸ್ ಸಂಸ್ಥೆಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ, 

 

 

 

ಕಿರಣ್ ಸಿಡ್ಲೇಹಳ್ಳಿ

(08 Oct 1982)