About the Author

ವೃತ್ತಿಯಿಂದ ಸಹಾಯಕ ನಿರ್ದೇಶಕರಾಗಿರುವ ಕೌಶಿಕ್ ಕೂಡುರಸ್ತೆ ಅವರು ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕೂಡುರಸ್ತೆ ಗ್ರಾಮದವರು. ತಂದೆ-ಹೆಚ್.ಎಸ್. ತಮ್ಮೇಗೌಡ, ತಾಯಿ ಭಾಗ್ಯ ಆಚಾರ್ಯ ಇನ್ಸ್ಟಿಟ್ಯೂಟಿನಲ್ಲಿ ಏರೋನಾಟಿಕಲ್ ಇಂಜಿನಿಯರಿಂಗ್ ಪದವಿಯನ್ನು ಪಡೆದಿರುವ ಅವರು ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ‘ಹೃದಯದ ಮಾತು’ ಇವರ ಮೊದಲ ಪ್ರಕಟಿತ ಕವನ ಸಂಕಲನ.

‘ಇಂತಿ ನಿಮ್ಮ ಆತ್ಮೀಯ’ ಎಂಬ ಕಾದಂಬರಿಯು ಇವರ ಎರಡನೆಯ ಪ್ರಕಟಿತ ಕೃತಿಯಾಗಿದ್ದು ಎರಡನೇ ಮುದ್ರಣವನ್ನು ಕಂಡಿದೆ. ಈ ಕಾದಂಬರಿಯು ‘ಬಹ್ರೇನ್ ಕನ್ನಡ ಡಿಂಡಿಮ’ ಸಮಾರಂಭದಲ್ಲಿ ಪ್ರದರ್ಶನಗೊಂಡಿದೆ. ಗ್ರಿಫಿನ್ಸ್ ಗುರುಕುಲ ಎಂಬ ಸಂಸ್ಥೆಗೆ ಬಿಸಿನೆಸ್ ಕುರಿತಾದ ‘ಬಿಸಿನೆಸ್ ಮತ್ತು ನಾನು’ ಹಾಗೂ ‘ಬಿಸಿನೆಸ್ ಚಾಣಕ್ಯ’ ಎಂಬ ಪುಸ್ತಕಗಳನ್ನು ನಿರೂಪಣೆ ಮಾಡಿಕೊಟ್ಟಿದ್ದಾರೆ. ಇವರು ‘ದಾನವ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದು, ‘ಆಟೋಶಂಕ್ರಿ’ ಎಂಬ ಕಿರುಚಿತ್ರವನ್ನು ನಿರ್ದೇಶಿಸಿದ್ದಾರೆ.

ತಾನು ಬರೆದ ಕಾದಂಬರಿಗಳನ್ನು ಸಿನಿಮಾರೂಪಕ್ಕೆ ತಂದು ನಿರ್ದೇಶಕನಾಗೇಕೆಂಬುದು ಇವರ ಗುರಿ. ಇವರ ಪತ್ತೇದಾರಿಯ ಕಾದಂಬರಿಗಳಾದ ‘ಕಾಲಯ ತಸ್ಮೈ ನಮಃ’, ಮತ್ತು ‘ಸ್ವಪ್ನದ ಬೆನ್ನೇರಿ’ಯನ್ನು ಸ್ನೇಹ ಬುಕ್ ಹೌಸ್ ನವರು ಪ್ರಕಟಿಸಿದ್ದಾರೆ. ಜೊತೆಗೆ ಮತ್ತೊಂದು ಪತ್ತೇದಾರಿಯ ಕಾದಂಬರಿ ‘ತ್ಯಾಗರಾಜ್ ಕಾಲೋನಿ’ ಪ್ರಕಟಗೊಂಡಿದೆ.

ಕೌಶಿಕ್ ಕೂಡುರಸ್ತೆ

BY THE AUTHOR