About the Author

ಜಾನಪದ ತಜ್ಞ, ಕತೆಗಾರ, ಕಾದಂಬರಿಕಾರ ಕೃಷ್ಣಮೂರ್ತಿ ಹನೂರು ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಮಾಡಿ ಸಂದರ್ಶಕ ಪ್ರಾಧ್ಯಾಪಕರಾಗಿ. 40 ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಅವರ ಆಜ್ಞಾತನೊಬ್ಬನ ಆತ್ಮ ಚರಿತ್ರೆ ಕಾದಂಬರಿ ಓದುಗರ ಮೇರೆಯಿಲ್ಲದ ಮೆಚ್ಚುಗೆ ಪಡೆದಿದೆ. ಅದೀಗ ಇಂಗ್ಲೀಷ್ ಗೆ ಅನುವಾದಗೊಂಡು ಪ್ರಕಟವಾಗಿದೆ. ಕೇರಿಗೆ ಬಂದ ಹೋರಿ, ಕತ್ತಲಲ್ಲಿ ಕಂಡ ಮುಖ ಮತ್ತು ಕಳೆದ ಮಂಗಳವಾರ ಮುಸ್ಸಂಜೆ ಅವರ ಕಥಾಸಂಕಲನಗಳು. ಬಾರೋ ಗೀಜಗನೆ, ನಿಕ್ಷೇಪ ಅವರ ಕಾದಂಬರಿಗಳು. ಜಾನಪದಕ್ಕೆ ಸಂಬಂಧಿಸಿದಂತೆ ಹಲವಾರು ಕೃತಿಗಳನ್ನು ಸಂಪಾದಿಸಿದ್ದಾರೆ. ಅವರು ಸಂಪಾದಿಸಿದ ವಿಶ್ವಕೋಶ ಎನ್ ಸೈಕ್ಲೋಪೀಡಿಯಾ ಆಫ್ ಫೋಕ್ ಕಲ್ಚರ್ ಆಫ್ ಕರ್ನಾಟಕ ಕನ್ನಡ ಜಾನಪದವನ್ನು ಇಂಗ್ಲಿಷ್ ನಲ್ಲಿ ಪರಿಚಯಿಸುತ್ತದೆ. ಇದನ್ನು ಚೆನ್ನೈನ ಇನ್ಟಿಟ್ಯೂಟ್ ಆಫ್ ಏಷ್ಯನ್ ಸ್ಟಡೀಸ್ ಪ್ರಕಟಿಸಿದೆ. ಅವರ ಪಿಎಚ್.ಡಿ ಮಹಾಪ್ರಬಂಧ ಮ್ಯಾಸ ಬೇಡರು ಬುಡಕಟ್ಟು ಅಧ್ಯಯನದ ಪುಸ್ತಕ ಇಂಗ್ಲೀಷ್ ಗೆ ಭಾಷಾಂತರವಾಗಿದ್ದು, ಕುಪ್ಪಂನ ದ್ರಾವಿಡ ವಿಶ್ವವಿದ್ಯಾಲಯ ಪ್ರಕಟಿಸಿದೆ. ಹನೂರರು ಶಾಸನ, ಹಳಗನ್ನಡ ಮತ್ತು ಜಾನಪದ ಅಧ್ಯಯನಗಳ ಕೊಂಡಿಯಂತಿದ್ದಾರೆ. ಅವರ ಇತ್ತೀಚಿನ ಕೃತಿ ಕಾಲುದಾರಿಯ ಕಥನಗಳು. 

ಕೃಷ್ಣಮೂರ್ತಿ ಹನೂರು

BY THE AUTHOR