About the Author

ರಾಜ್ಯಸಭಾ ಸದಸ್ಯರಾಗಿರುವ ಎಲ್. ಹನುಮಂತಯ್ಯ ಪ್ರಮುಖ ಕವಿಗಳಲ್ಲಿ ಒಬ್ಬರು. ಬೆಂಗಳೂರು ಜಿಲ್ಲೆ ರಾಮೇಶ್ವರ ಗ್ರಾಮದವರಾದ ಅವರು ಮೊದಲಿಗೆ ಬ್ಯಾಂಕ್ ನೌಕರಿಯಲ್ಲಿದ್ದರು. ಸೃಜನಶೀಲ ಸಾಹಿತಿ, ವಾಗ್ಮಿ ಹಾಗೂ ವಿಮರ್ಶಕ ಆಗಿರುವ ಅವರು ವಿಧಾನ ಪರಿಷತ್ ಸದಸ್ಯರಾಗಿದ್ದರು. 'ಕಪ್ಪು ಕಣ್ಣಿನ ಹುಡುಗಿ', 'ಅವ್ವ (ಕವಿತಾ ಸಂಕಲನ); 'ಅಂಬೇಡ್ಕರ್ ಕವನಗಳು’ (ಸಂಪಾದನೆ) 'ದಲಿತ ಲೋಕದ ಒಳಗೆ' (ವಿಮರ್ಶೆ), ಅಂಬೇಡ್ಕರ್‌' (ನಾಟಕ) ಪ್ರಕಟಿತ ಕೃತಿಗಳು. ಅವರ ಸಮಗ್ರ ಕೃತಿಗಳನ್ನು ಕನ್ನಡ ಪುಸ್ತಕ ಪ್ರಾಧಿಕಾರ ಪ್ರಕಟಿಸಿದೆ. ಅವರು ಜನಪರ ಸಂಘಟನೆಗಳಲ್ಲಿ ಸಕ್ರಿಯ ಪಾತ್ರ ವಹಿಸುತ್ತಿದ್ದಾರೆ.

ಎಲ್. ಹನುಮಂತಯ್ಯ

(10 Jun 1955)