About the Author

ಹಾಸ್ಯ ಬರಹಗಾರ, ಬಾಷಣಕಾರ ಎಂ.ಎಸ್.ನರಸಿಂಹಮೂರ್ತಿ ಅವರು ಕೋಲಾರ ಜಿಲ್ಲೆಯ ಮಾಲೂರಿನಲ್ಲಿ 1949 ಅಕ್ಟೋಬರ್ 20 ರಂದು ಜನಿಸಿದರು. ಕಾದಂಬರಿ, ಮಕ್ಕಳಸಾಹಿತ್ಯ, ವಿಚಾರ ಸಾಹಿತ್ಯ, ಹಾಸ್ಯ ಸಂಕಲನ ಸೇರಿದಂತೆ ಹಲವು ಸಾಹಿತ್ಯ ಪ್ರಕಾರಗಳಲ್ಲಿ ಛಾಪು ಮೂಡಿಸಿರುವ ಇವರು ಇದುವರೆಗೆ 50 ಪುಸ್ತಕಗಳನ್ನು ಬರೆದಿದ್ದಾರೆ. 5000 ಕ್ಕೂ ಹೆಚ್ಚು ನಗೆ ಎಪಿಸೋಡ್‌ಗಳನ್ನು ರಚಿಸಿದ ರಾಷ್ಟ್ರೀಯ ದಾಖಲೆ ಅವರದು. 2000ಕ್ಕೂ ಹೆಚ್ಚು ಪ್ರಕಟಿತ ನಗೆ ಲೇಖನಗಳು, 100ಕ್ಕೂ ಹೆಚ್ಚು ಬಾನುಲಿ ನಾಟಕಗಳ ರಚನೆ. 

ಸ್ವಯಂ ವಧು, ಶ್ರಮದಾನ, ಬಾಬ್ಬಿ, ಗೂಳಿಕಾಳಗ, ಕಂಡಕ್ಟರ್ ಕರಿಯಲಪ್ಪ, ವೈಕುಂಠಕ್ಕೆ ಬುಲಾವ್, ಕಿವುಡು ಸಾರ್ ಕಿವುಡು ಮತ್ತು ಇತರೆ ನಗೆ ನಾಟಕಗಳು, ವರ್ಗಾವರ್ಗಿ ಮುಂತಾದ ಹಾಸ್ಯ ಸಂಕಲನಗಳು, ಮಂದಸ್ಮಿತ ಎಂಬ ಕಾದಂಬರಿ, ಭಾರತದ ರಾಷ್ಟ್ರೀಯತೆ ಎಂಬ ವಿಚಾರ ಸಾಹಿತ್ಯ ಮುಂತಾದವು ಅವರ ಪ್ರಮುಖ ಕೃತಿಗಳು. ರಾಜ್ಯ ಸಾಹಿತ್ಯ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿರುವ ಎಂಎಸ್ ಎನ್ ಅವರು ಕಿರುತರೆಯ ಕೆಲವು ಹಾಸ್ಯ ಧಾರಾವಾಹಿಗಳಲ್ಲಿ ಸಂಭಾಷಣೆ ಬರೆದ ಕೀರ್ತಿಗೂ ಪಾತ್ರರಾಗಿದ್ದಾರೆ.

ಎಂ.ಎಸ್. ನರಸಿಂಹಮೂರ್ತಿ

(20 Oct 1949)