About the Author

ಮಧು ಬಿರಾದಾರ ಅವರು ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ತ ತಾಲೂಕಿನ ಸುಸಲಾದ ಗ್ರಾಮದವರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದಾರೆ. ಸದ್ಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರಗಿಯಲ್ಲಿ, "ಜಾಗತಿಕ ಕಾವ್ಯದ ಕನ್ನಡ ಅನುವಾದಗಳು: ತಾತ್ವಿಕ ಅಧ್ಯಯನ " ವಿಷಯ ಕುರಿತು ಸಂಶೋಧನೆ ಮಾಡುತ್ತಿದ್ದಾರೆ. ಸಂಚಯ‌ ಮತ್ತು ಸಂಕ್ರಮಣ ಕಾವ್ಯ ಬಹುಮಾನ ಹಾಗೂ ಕ್ರೈಸ್ಟ್ ಕಾಲೇಜ್ ದ.ರಾ. ಬೇಂದ್ರೆ ಕವನ ಸ್ಪರ್ಧೆಯಲ್ಲಿ ಆರು ಭಾರಿ ಬಹುಮಾನಿತರು. "‌ಕಾಲದ ರಶೀದಿ ಪುಟ" ಪ್ರಕಟಿತ ಕವನ ಸಂಕಲನ. ಈ ಸಂಕಲನವು ಗುಲ್ಬರ್ಗಾ ವಿಶ್ವವಿದ್ಯಾಲಯ ಕೊಡಮಾಡುವ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾಗಿದೆ.

ಮಧು ಬಿರಾದಾರ

(26 Aug 1989)