About the Author

ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ನವಲಕಲ್ಲಿನ ಮಹಾಂತೇಶ ನವಲಕಲ್ ಅವರು ಕೃಷಿ ಪದವೀಧರರು. ’ನೀರಿನ ನೆರಳು’ ಇವರ ಮೊದಲ ಕಥಾಸಂಕಲನ. ’ನಾನು ಚಂದ್ರಗುಪ್ತನೆಂಬ ಮೌರ್ಯ’ ನಾಟಕವು ಹಲವು ಯಶಸ್ವಿ ಪ್ರದರ್ಶನ ಕಾಣುವುದರ ಜೊತೆಗೆ ಪುಸ್ತಕವಾಗಿಯೂ ಪ್ರಕಟವಾಗಿ ಮೆಚ್ಚುಗೆ ಗಳಿಸಿದೆ. ಪುಂಚಾವರಂ ಕುರಿತಾದ ನಾಟಕ ವಿವಾದಕ್ಕೆ ಎಡೆ ಮಾಡಿತ್ತು. ಬೆಸಗರಹಳ್ಳಿ ರಾಮಣ್ಣ ಕಥಾಪುರಸ್ಕಾರ, ದೆಹಲಿ ಕರ್ನಾಟಕ ಸಂಘದ ನೃಪತುಂಗ ಪುರಸ್ಕಾರ, ಪಾಪು ಮರಸ್ಕಾರ, ಸಂಕ್ರಮಣ ಕಥಾ ಪುರಸ್ಕಾರ, ಅಮ್ಮ ಪುರಸ್ಕಾರ, ಉರಿಲಿಂಗ ಪೆದ್ದಿ ಪುರಸ್ಕಾರ, ರಾಜ್ಯೋತ್ಸವ ಪುರಸ್ಕಾರ, ಎರಡು ಬಾರಿ ಇವರ ಕತೆಗಳಿಗೆ ಗುಲಬರ್ಗಾ ವಿಶ್ವವಿದ್ಯಾಲಯದಿಂದ ರಾಜಪುರೋಹಿತ ದತ್ತಿನಿಧಿಯ ಚಿನ್ನದ ಪದಕ ಪುರಸ್ಕಾರ ಪಡೆದಿರುವ ಮಹಾಂತೇಶ ಅವರು ಸದ್ಯ ಕಲಬುರಗಿಯಲ್ಲಿ ವಾಸಿಸುತ್ತಿದ್ದಾರೆ.

ಮಹಾಂತೇಶ ನವಲಕಲ್

(24 Nov 1970)

Stories/Poems

BY THE AUTHOR