About the Author

ವೃತ್ತಿಯಲ್ಲಿ ಮಕ್ಕಳ ನೆಚ್ಚಿನ ಶಿಕ್ಷಕರು ಹಾಗೂ ಯುವಕವಿ ಮೈಲಾರಪ್ಪ ಬೂದಿಹಾಳ ಅವರು ಜನಿಸಿದ್ದು ಗದಗ ಜಿಲ್ಲೆಯ ಹೊಸೂರು ಗ್ರಾಮದಲ್ಲಿ. ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿ.ಎ ಪದವಿ ಹಾಗೂ ಮಾನಸ ಗಂಗೋತ್ರಿ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.ಪ್ರಸ್ತುತ ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಹಳೇ ಜೀರಾಳ  ಕಲ್ಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 

ಜನಪದ ಕಲಾವಿದರೂ ಆಗಿರುವ ಮೈಲಾರಪ್ಪನವರೂ ಕನಕಗಿರಿ ಉತ್ಸವ, ಆನೆಗೊಂದಿ ಉತ್ಸವ, ಹಂಪಿ ಉತ್ಸವ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಲಾವಿದರಾಗಿ ಭಾಗವಹಿಸಿದ್ದಾರೆ. 

ಮೈಲಾರಪ್ಪ ಬೂದಿಹಾಳ