About the Author

ಲೇಖಕ ಮಲ್ಲಿಕಾರ್ಜುನ ಹೊಸಪಾಳ್ಯ ಅವರ ಹುಟ್ಟೂರು ತುಮಕೂರು ಜಿಲ್ಲೆಯ ಹೊಸಪಾಳ್ಯ. ಮಧುಗಿರಿ, ತುಮಕೂರು, ಬೆಂಗಳೂರು ಮತ್ತು ಮೈಸೂರಿನಲ್ಲಿ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ ಅವರು ಅರ್ಥಶಾಸ್ತ್ರ ಹಾಗೂ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯಲ್ಲಿ ಮೊದಲ ರ್ಯಾಂಕ್ ನೊಂದಿಗೆ ಎರಡು ಚಿನ್ನದ ಪದಕ ಮತ್ತು ಪದವಿಯಲ್ಲಿ ಕನ್ನಡ ವಿಷಯದಲ್ಲಿ ಹೆಚ್ಚಿನ ಅಂಕಗಳಿಕೆಗಾಗಿ ಚಿನ್ನದ ಪದಕ ಪಡೆದಿದ್ದಾರೆ. 

ದೇಸಿ ತಳಿ, ನಾಟಿ ಬೀಜಗಳ ಸಂರಕ್ಷಣೆ ಕುರಿತು ವಿಶೇಷ ಆಸಕ್ತಿ, ಜಲಸಂರಕ್ಷಣೆ, ಸುಸ್ಥಿರ ಕೃಷಿ, ಸಿರಿಧಾನ್ಯ ಚಟುವಟಿಕೆಗಳಿಗೆ ಬೆಂಬಲ. ಜಲಜಾಗೃತಿಗಾಗಿ ಕಾರ್ಯಕ್ರಮ ಸಂಘಟನೆ. ಪಾರಂಪರಿಕ ಜಲನಿಧಿಗಳಾದ ತಲುಪರಿಗೆ ಬಗ್ಗೆ ಅಧ್ಯಯನ, ಪುನರುಜ್ಜೀವನಕ್ಕಾಗಿ ಪರಿಶ್ರಮ. ಕಳೆದ ಎರಡು ದಶಕಗಳಿಂದ ವಿವಿಧ ಪತ್ರಿಕೆಗಳಲ್ಲಿ ಹವ್ಯಾಸಿ ಬರಹಗಾರ. ಕೃಷಿ ವಿಚಾರಗಳ ಬರವಣಿಗೆ. 

ಕೃಷಿ ಮಾಧ್ಯಮ ಕೇಂದ್ರದ ಕೃಷಿ ಪತ್ರಿಕೋದ್ಯಮ ಪ್ರಶಸ್ತಿ. ಸಿಡಿಎಲ್ ಸಂಸ್ಥೆಯ ಚರಕ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ, ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ನೀಡುವ ಮುರುಘಾಶ್ರೀ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತ. ನೆಟ್ಟಿರಾಗಿ, ಸುಸ್ಥಿರತೆಯೆಡೆಗೆ, ಕೃಷಿ ಆಚರಣೆ, ಪೈರುಪಚ್ಚೆ, ಕೊರಲೆ, ಚೌಳು ನೆಲದ ಬಂಗಾರ, ಸಿರಿಧಾನ್ಯ ಪರಂಪರೆ, ನಶಿಸುತ್ತಿರುವ ನೀರಿನ ಜ್ಞಾನ, ತಲಪರಿಕೆ ಸೇರಿದಂತೆ ಹಲವು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. 

ಮಲ್ಲಿಕಾರ್ಜುನ ಹೊಸಪಾಳ್ಯ