About the Author

ಮೂಲತಃ ಬೆಂಗಳೂರಿನವರೇ ಆದ ಕವಯತ್ರಿ ಮಮತಾ ಜಿ. ಸಾಗರ್‌ ಅವರು ಜನಿಸಿದ್ದು 1966 ಜನವರಿ 19ರಂದು. ತಾಯಿ ಎಸ್‌.ಶೇಖರಿಬಾಯಿ, ತಂದೆ ಎನ್‌.ಗಿರಿರಾಜ್‌. ಕಾಲೇಜು ದಿನಗಳಿಂದಲೂ ಕನ್ನಡ ಸಾಹಿತ್ಯದಲ್ಲಿ ಅತೀವ ಆಸಕ್ತಿಯಿದ್ದ ಮಮತಾ ಅವರು ಹಲವಾರು ಕವಿಗೋಷ್ಠಿಗಳಲ್ಲಿ ಕವನ ರಚಿಸಿ ವಾಚಿಸಿದ್ದಾರೆ. ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಬರೆದಿರುವ ಪ್ರಮುಖ ಕವನ ಸಂಕಲನಗಳೆಂದರೆ ಕಾಡ ನವಿಲಿನ ಹೆಜ್ಜೆ, ನದಿಯ ನೀರಿನ ತೇವ ಮುಂತಾದವು.

ಮಮತಾ ಅವರಿಗೆ ಕರ್ನಾಟಕ ಲೇಖಕಿಯರ ಸಂಘದ ಗುಡಿಬಂಡೆ ಪೂರ್ಣಿಮಾ ದತ್ತಿ ಬಹುಮಾನ ಒಲಿದು ಬಂದಿದೆ. ಹಾಗೆಯೇ ಸಾಹಿತ್ಯಕ್ಕಾಗಿ ಕೇಂದ್ರ ಸರ್ಕಾರದ ಜೂನಿಯರ್‌ ಫೇಲೋಷಿಪ್‌ ಕೂಡ ಇವರಿಗೆ ದೊರೆತಿದೆ.

ಮಮತಾ ಜಿ. ಸಾಗರ

(19 Jan 1966)

BY THE AUTHOR