About the Author

ಕವಿ ಎಂ.ಜಿ. ತಿಲೋತ್ತಮೆ ಅವರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವರು. ಪದವಿ ವಿಧ್ಯಾಭ್ಯಾಸವನ್ನು ಭಟ್ಕಳದಲ್ಲಿ ಪೂರೈಸಿದರು. ಸದ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪುತ್ತೂರಿನ ವಿದ್ಯಾರ್ಥಿ ನಿಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿದ್ಯಾರ್ಥಿಯಾಗಿದ್ದಾಗಲೇ ಸಾಹಿತ್ಯದ ಬಗ್ಗೆ ಒಲವು. 2013ರಲ್ಲಿ ‘ನಾ ಅಬಲೆಯಲ್ಲ’, 2020ರಲ್ಲಿ `ನೀಲಿ ಬಯಲು’ ಕವನ ಸಂಕಲನಗಳು ಪ್ರಕಟಗೊಂಡಿವೆ. ಅವರಿಗೆ ಯುವ ಬರಹಗಾರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ.

ಎಂ.ಜಿ. ತಿಲೋತ್ತಮೆ