About the Author

ಲೇಖಕಿ ಮೌಲ್ಯ ಸ್ವಾಮಿ ಅವರು ಮೂಲತಃ ಮೈಸೂರಿನವರು. ಕನ್ನಡ ಕಾವ್ಯ ಪರಂಪರೆಗೆ ತೆರೆದುಕೊಳ್ಳುತ್ತಿರುವ ಹೊಸ ದನಿ ಮೌಲ್ಯ ಸ್ವಾಮಿ ಅವರು ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವೀಧರರು. ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಅವರಿಗೆ 2015ನೇ ಸಾಲಿನ ಟೊಟೊ ಪುರಸ್ಕಾರ ಲಭಿಸಿದೆ. ರಂಗಭೂಮಿಯಲ್ಲಿಯೂ ಗುರುತಿಸಿಕೊಂಡಿರುವ ಮೌಲ್ಯಸ್ವಾಮಿ, ಹಲವು ನಾಟಕಗಳಲ್ಲಿಯೂ ಅಭಿನಯಿಸಿದ್ದಾರೆ. ಜನಮಿತ್ರ ಕಾವ್ಯಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದು, ಸಂಚಯ ಕಾವ್ಯ ಬಹುಮಾನ ಪಡೆದಿದ್ದಾರೆ. ‘ಸುಮ್ಮನೆ ಬಿದ್ದಿರುವ ಬಿಕ್ಕುಗಳು’ ಮೌಲ್ಯಸ್ವಾಮಿ ಅವರ ಚೊಚ್ಚಲ ಕವನ ಸಂಕಲನ.

ಮೌಲ್ಯ ಸ್ವಾಮಿ