About the Author

ಎನ್.ಕೆ.ಇಬ್ಬನಿ ನಡಂಪಲ್ಲಿ ಕಾವ್ಯನಾಮದಿಂದ ಬರೆಯುತ್ತಿರುವ ಲೇಖಕ ಎನ್.ಕೆ. ಮಂಜುನಾಥ ಅವರು ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಮಸಮುದ್ರಂ ಹೋಬಳಿಯ ನಡಂಪಲ್ಲಿ (ಜನನ: 14-05-1984) ಗ್ರಾಮದವರು. ತಂದೆ ಕೆಂಚಪ್ಪ, ತಾಯಿ ನಂಜಮ್ಮ. ಸಂಘಟನೆಯೊಂದಿಗೆ ಬದುಕು ರೂಪಿಸಿಕೊಳ್ಳುತ್ತಾ ಸಾಹಿತ್ಯಾಸಕ್ತಿ ಬೆಳೆಸಿಕೊಂಡವರು. ಕೃಷಿಕರು. 2008ರಲ್ಲಿ ಕಾವ್ಯಾಮೃತಾ-ಸಂಪಾದಿತ ಕವನಗಳ ಸಂಕಲನ ಹಾಗೂ 2010ರಲ್ಲಿ ತಮ್ಮದೇ ಕವನ ಸಂಕಲನ-ಆ ದಿನಗಳು; ಪ್ರಕಟಗೊಂಡಿವೆ.

ಎನ್.ಕೆ.ಇಬ್ಬನಿ ನಡಂಪಲ್ಲಿ

(14 May 1984)