About the Author

"ಜ್ಞಾನದೀಪಿಕ ಎಜುಕೇಶನಲ್ ಟ್ರಸ್ಟ್ (ರಿ) ಇದರ ವ್ಯವಸ್ಥಾಪಕ ಟ್ರಸ್ಟಿಯಾಗಿರುವ ಎನ್‍ ಸತ್ಯಪ್ರಕಾಶ್‍ ಅವರು ಓರ್ವ ಯಶ್ಸಸ್ವಿ ಶಿಕ್ಷಕ. ಶಿಕ್ಷಣ ಕೇಂದ್ರಗಳು ವ್ಯಾಪಾರೀಕರಣಗೊಳ್ಳುತ್ತಿರುವ ಕಾಲದಲ್ಲಿ ಶಿಕ್ಷಕ ವೃತ್ತಿಯ ಪಾವಿತ್ರ್ಯತೆ ಹಾಗೂ ಜವಾಬ್ದಾರಿಗಳ ಬಗ್ಗೆ ಉತ್ತಮ ಮೌಲ್ಯಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿ ಇತರರಿಗೆ ಮಾದರಿಯಾದ ಶಿಕ್ಷಕರಾಗಿದ್ದಾರೆ. 
ಶಿಕ್ಷಕರಾಗಿರುವ ಜೊತೆ ಜೊತೆಯೇ, ಇವರು ಓರ್ವ ಉತ್ತಮ ಸಂಪನ್ಮೂಲ ವ್ಯಕ್ತಿ, ಉತ್ತಮ ಬರಹಗಾರ ಕೂಡಾ ಆಗಿದ್ದು ಈ ವರೆಗೆ ಶಿಕ್ಷಣ ಕ್ಷೇತ್ರಕ್ಕೆ ಹಲವು ಪುಸ್ತಕಗಳನ್ನು ಹಾಘೂ ಲೇಖನಗಳನ್ನು ಬರೆದಿರುವ ಇವರು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಹಲವು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ವಿಚಾರ ಸಂಕೀರ್ಣಗಳಲ್ಲಿ ಹಾಗೂ ಶೈಕ್ಷಣಿಕ ಸಮ್ಮೇಳನಗಳಲ್ಲಿ ಭಾಗವಹಿಸಿ ಪೂರ್ಣಪ್ರಬಂಧಗಳನ್ನು ಮಂಡಿಸಿದ ಖ್ಯಾತಿ ಇವರಿಗಿದೆ.

ಎನ್‍. ಸತ್ಯಪ್ರಕಾಶ್