About the Author

ಸಂಶೋಧಕ, ಲೇಖಕ ನಾಗಭೂಷಣ ಬಗ್ಗನಡು ಅವರು ಮೂಲತಃ ತುಮಕೂರಿನ ದೊಡ್ಡೇನಹಳ್ಳಿ ಗ್ರಾಮದವರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವೀಧರರು. ‘ಬದಲಾಗುತ್ತಿರುವ ಆಧುನಿಕ ಪರಿಸರದಲ್ಲಿ ಜಾನಪದ’ ಪ್ರಬಂಧ ಮಂಡಿಸಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್‌.ಡಿ ಪದವೀಧರರು. ಪ್ರಸ್ತುತ ತುಮಕೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ.  

ಬಂಡಾಯ ಚಳವಳಿ, ತಳ ಸಮುದಾಯಗಳ ಹಕ್ಕುಗಳ ಹೋರಾಟ, ಜನಪರ ಚಳವಳಿಗಳಲ್ಲಿ ಸಕ್ರಿಯರು. ಇವರ ಮೊದಲ ಕೃತಿ ‘ಆಧುನಿಕ ಜಾನಪದ’. ಕಡಕೋಳ ಮಡಿವಾಳಪ್ಪ, ಸುಡುಗಾಡು ಸಿದ್ಧರು, ಕಾಲುದಾರಿ, ಬೆಂಕಿ ಬೆಳಕು, ಲಂಕೇಶ್ ಒಂದು ನೆನಪು ಹಾಗೂ ಸಂಶೋಧನಾ ಕೃತಿಗಳು: ವೃತ್ತಿ ರಂಗಭೂಮಿ ನಾಟಕಗಳಲ್ಲಿ ಅಸ್ಪೃಷ್ಯತೆ ಮತ್ತು ದಲಿತತ್ವದ ನೆಲೆಗಳು, ದಲಿತ ಪುರಾಣಗಳು. 

ನಾಗಭೂಷಣ ಬಗ್ಗನಡು

(01 Jun 1976)