About the Author

ಸೂಕ್ಷ್ಮ ಸಂವೇದನೆಯ ಕತೆಗಾರ್ತಿ ನಾಗರೇಖಾ ಗಾಂವಕರ ಅವರು ಮೂಲತಃ ಉತ್ತರ ಕನ್ನಡದವರು. ಕನ್ನಡ ಹಾಗೂ ಇಂಗ್ಲೀಷ್‌ನಲ್ಲಿ ಸ್ನಾತಕೋತ್ತರ ಪದವಿಧರೆಯಾದ ಅವರು ಪ್ರಸ್ತುತ ದಾಂಡೇಲಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

`ಏಣಿ, ಪದಗಳೊಂದಿಗೆ ನಾನು, ಬರ್ಫದ ಬೆಂಕಿ’ (ಕವನ ಸಂಕಲನಗಳು), ಪಾಶ್ಚಿಮಾತ್ಯ ಸಾಹಿತ್ಯ ಲೋಕ, ಆಂಗ್ಲ ಸಾಹಿತ್ಯ ಲೋಕ (ಅಂಕಣ ಬರಹ ಕೃತಿ), ಸಮಾನತೆಯ ಸಂಧಿಕಾಲದಲ್ಲಿ (ಮಹಿಳಾ ಸಮಾನತೆಯ ಕುರಿತ ಅಂಕಣ ಬರಹ ಕೃತಿ), ಕವಾಟ (ಪುಸ್ತಕ ಪರಿಚಯ ಕೃತಿ) ಅವರ ಪ್ರಮುಖ ಕೃತಿಗಳು. 

ಅವರ ‘ಏಣಿ’ ಕವನ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಶಾರದಾ ರಾಮಲಿಂಗಪ್ಪ ದತ್ತಿ ಪ್ರಶಸ್ತಿ, ಬರ್ಫದ ಬೆಂಕಿ ಸಂಕಲನಕ್ಕೆ ಬೆಟಗೇರಿ ಕೃಷ್ಣಶರ್ಮ ಯುವ ಕಾವ್ಯ ಪ್ರಶಸ್ತಿ ಲಭಿಸಿದೆ. ಆಕಾಶವಾಣಿ ಧಾರವಾಡ, ಕಾರವಾರಗಳಲ್ಲಿ ಚಿಂತನ ಕಾರ್ಯಕ್ರಮಗಳಲ್ಲಿ ಕತಾವಾಚನ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಹೆಗ್ಗಳಿಕೆ ಅವರದು.

ಅಲ್ಲದೆ 2018ರ ಸಂಕ್ರಮಣ ಕಾವ್ಯ ಪ್ರಶಸ್ತಿ, ರವಿಕಿರಣ ಸಾಹಿತ್ಯ ಪ್ರತಿಷ್ಠಾನ ಬೆಂಗಳೂರು ಪ್ರಥಮ  ಕಥಾ ಬಹುಮಾನ, ತುಷಾರ ಮಾಸ ಪತ್ರಿಕೆಯ ಕ್ಯಾಲಿಫೋರ್ನಿಯಾ ಕಾವ್ಯಾಂಜಲಿಯಲ್ಲಿ ತೃತೀಯ ಕಥಾ ಬಹುಮಾನ ಸಂದಿವೆ.

ನಾಗರೇಖಾ ಗಾಂವಕರ

BY THE AUTHOR