About the Author

ನಾಗೇಶ್ ಜೆ. ನಾಯಕ ವೃತ್ತಿಯಲ್ಲಿ ಶಿಕ್ಷಕರು. 1975 ಫೆಬ್ರವರಿ 23 ರಂದು ಸವದತ್ತಿಯಲ್ಲಿ ಜನಿಸಿದರು. ಕನ್ನಡ ದಿನಪತ್ರಿಕೆಗಳಲ್ಲಿ ಇವರ ಲೇಖನಗಳು ಪ್ರಕಟವಾಗಿವೆ. ‘ನೀನೊಂದು ಮುಗಿಯದ ಸಂಭ್ರಮ, ಪ್ರೀತಿಯಿಂದ ಪ್ರೀತಿಗೆ, ಭರವಸೆಗಳ ಬೆನ್ನೇರಿ, ಪುಟ್ಟ ಪದ್ಯಗಳು, ಕವಿ ಸಮಯ  ಮಠದೊಳಗಣ ಬೆಕ್ಕು’ ಮುಂತಾದ ಕೃತಿಗಳು ಪ್ರಕಟಣೆಗೊಂಡಿವೆ.

ಬಯಲ ಕನ್ನಡಿ-ವಿಮರ್ಶಾ ಸಂಕಲನ, ಒಡಲ ದನಿ-ಅಂಕಣ ಬರಹಗಳು, ಘನದ ಕುರುಹು-ವ್ಯಕ್ತಿ ಚಿತ್ರಣ, ಚಿನ್ನದ ಚೂರಿ-ಕಥಾ ಸಂಕಲನ ಅವರ ಇತ್ತಿಚಿನ ಕೃತಿಗಳಾಗಿವೆ. ಇವರ ಸಾಹಿತ್ಯ ರಚನೆಗಾಗಿ ಸಂಕ್ರಮಣ ಸಾಹಿತ್ಯ ಪ್ರಶಸ್ತಿ, ಸಂಚಯ ಕಾವ್ಯ ಪುರಸ್ಕಾರ, ಆಜೂರು ಪುಸ್ತಕ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ, ಇಂಚಲ ಕಾವ್ಯ ಪ್ರಶಸ್ತಿ, ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿ, ಸಾಹಿತ್ಯ ಚಿಗುರು ಪ್ರಶಸ್ತಿಗಳು ಸಂದಿವೆ.

ನಾಗೇಶ್ ಜೆ. ನಾಯಕ

(23 Feb 1975)