About the Author

ಡಾ. ಪಿ.ವಿ. ಭಂಡಾರಿ ವೈದ್ಯರು. ಜೆ.ಜೆ.ಎಂ.ವೈದ್ಯಕೀಯ ಮಹಾವಿದ್ಯಾನಿಲಯದಲ್ಲಿ ಎಂ.ಬಿ.ಬಿ.ಎಸ್, ಮಣಿಪಾಲ ವಿಶ್ವವಿದ್ಯಾನಿಲಯದಲ್ಲಿ ಮನೋವೈಜ್ಞಾನಿಕ ಚಿಕಿತ್ಸೆಯಲ್ಲಿ ಡಿಪ್ಲೊಮಾ, ಮಂಗಳೂರಿನ ಫಾ. ಮುಲ್ಲರ್ಸ್ ವೈದ್ಯಕೀಯ ಮಹಾ ವಿದ್ಯಾನಿಲಯದಿಂದ ಡಿ.ಎನ್.ಬಿ (ಮನೋವೈಜ್ಞಾನಿಕ ಚಿಕಿತ್ಸೆ) ಪದವಿ ಪಡೆದರು.

ತಾಲ್ಲೂಕು ಕನ್ನಡ ಸಾಹಿತ್ಯ ಪ್ರಶಸ್ತಿ. ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಡಾ. ಎಸ್.ಎಸ್. ಜಯರಾಂ ಪ್ರಶಸ್ತಿ, ಸ್ಪಂದನ ಪ್ರಶಸ್ತಿ, ಶ್ರೇಷ್ಠ ಮನೋವೈದ್ಯ-2012 ಪ್ರಶಸ್ತಿ, ಕರ್ನಾಟಕ ರಾಜ್ಯ ಸರ್ಕಾರದಿಂದ ನೀಡುವ 2012ರ ಸಂಯಮ ಪ್ರಶಸ್ತಿಗಳು ಸಂದಿವೆ.

ಕಳೆದ 15 ವರ್ಷಗಳಿಂದ ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ತಜ್ಞ ಮನೋವೈದ್ಯ ಮತ್ತು ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಉಪನ್ಯಾಸಗಳ ಮೂಲಕವೂ ಸ್ವಸ್ಥ ಜೀವನಕ್ಕಾಗಿ ಸಾವಿರಾರು ಜನರಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. 

ಪಿ.ವಿ. ಭಂಡಾರಿ