About the Author

ಪತ್ರಕರ್ತ, ಬರಹಗಾರ ಪದ್ಮನಾಭ ಭಟ್‌ ಅವರು ಜನಿಸಿದ್ದು 1990 ಜೂನ್‌ 27ರಂದು. ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶೇವ್ಕಾರ ಗ್ರಾಮದಲ್ಲಿ.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಪ್ರಜಾವಾಣಿಯಲ್ಲಿ ವರದಿಗಾರ ಹಾಗೂ ಉಪ ಸಂಪಾದಕರಾಗಿ ವೃತ್ತಿ ಜೀವನ ಆರಂಭಿಸಿದರು. ಪ್ರಸ್ತುತ ಸುಧಾ ವಾರಪತ್ರಿಕೆಯ ಉಪಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಸಿನಿಮಾ, ರಂಗಭೂಮಿ, ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿ ಇರುವ ಇವರ ಚೊಚ್ಚಲ ಕೃತಿ ಕೇಪಿನ ಡಬ್ಬಿ. ಈ ಕಥಾ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರ, ಕರ್ನಾಟಕ ಸಾಹಿತ್ಯ ಅಕಾಡೆಮಿ ದತ್ತಿ ಪ್ರಶಸ್ತಿ, ಛಂದ ಪುಸ್ತಕ ಬಹುಮಾನ, ಮಾಸ್ತಿ ಕಥಾ ಪುರಸ್ಕಾರ, ಟೋಟೊ ಪುರಸ್ಕಾರ ಹಾಗೂ ಇತರ ಪ್ರಶಸ್ತಿಗಳು ಸಂದಿವೆ.

ಪದ್ಮನಾಭ ಭಟ್‌ ಶೇವ್ಕಾರ

(27 Jun 1990)

Awards