About the Author

ಬಂಟ್ವಾಳ ತಾಲೂಕು ಕುರ್ನಾಡು ಗ್ರಾಮದ ನಿವಾಸಿ ಪಂಕಜ ಕೆ ಮುಡಿಪು ಅವರು ಕೊಡಕ್ಕಲ್ಲು ವೆಂಕಟ್ರಮಣ ಭಟ್ ಮತ್ತು ಸಾವಿತ್ರಿ ದಂಪತಿಗಳ ಪುತ್ರಿ. ಅಂಚೆ ಇಲಾಖೆಯಲ್ಲಿ ಸುದೀರ್ಘ ಸೇವೆಯ ಬಳಿಕ ಅಸ್ಸಿಸ್ಟಂಟ್.ಪೋಸ್ಟ್ ಮಾಸ್ಟರ್ ಆಗಿ ಸ್ವಯಂ ನಿವೃತ್ತಿ ಪಡೆದಿರುವ ಇವರು ಇತಿಹಾಸದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಥೆ ಕವನಗಳನ್ನು ಅಲ್ಲದೆ ಇತ್ತೀಚಿಗೆ ಪ್ರವರ್ಧಮಾನಕ್ಕೆ ಬರುತ್ತಿರುವ ಜಪಾನಿ ಪ್ರಕಾರದ ಹಾಯ್ಕು, ಟಂಕಾ ಗಜಲ್ ,ಚುಟುಕು ,ಜಾನಪದ ಗೀತೆ ,ರುಬಾಯಿ, ಹನಿಕವನ ಚಿತ್ರಕವನ ,ಭಕ್ತಿಗೀತೆ,ಭಾವಗೀತೆ , ದೇಶಭಕ್ತಿಗೀತೆ, ನ್ಯಾನೊ ಕಥೆಗಳು ಸಣ್ಣ ಕಥೆಗಳು ಇತ್ಯಾದಿ ಹಲವು ಪ್ರಕಾರಗಳನ್ನು ಬರೆಯುವ ಹ್ಯಾಸವುಳ್ಳವರು. ತುಮಕೂರಿನಲ್ಲಿ ನಡೆದ ರಾಜ್ತಮಟ್ಟದ ಸಾಹಿತ್ಯ ಸಮ್ಮೇಳನದಲ್ಲಿ ಇವರ ಮೊದಲ ಕವನ ಸಂಕಲನ ‘ಸಾವಿತ್ರಿ’ಗೆ ಸಾಹಿತ್ಯ ಶರಭ ಪ್ರಶಸ್ತಿ ಲಭ್ಯವಾಗಿದೆ. ಕೃತಿ: ‘ಸಾವಿತ್ರಿ’ (ಕವನ ಸಂಕಲನ -2019)

ಪಂಕಜಾ ರಾಮ ಭಟ್