About the Author

ಹನಿಗವನಗಳ ರಚನೆಯಲ್ಲಿ ಆಸಕ್ತಿಯುಳ್ಳ ಪರಿಮಳಾರಾವ್ ಜಿ. ಆರ್. ತಮ್ಮ ದಿನನಿತ್ಯದ ಅನುಭವಗಳ ಮನಸ್ಸಿನ ಮಾತುಗಳನ್ನು ಹನಿಗವನಗಳಿಗೆ ಇಳಿಸುತ್ತಾರೆ. 1941 ಜನವರಿ 06 ರಂದು ಆಂಧ್ರ ಪ್ರದೇಶದ ಕರ್ನೂಲ್‌ನಲ್ಲಿ ಜನಿಸಿದರು. ’ಮಂದಾರ ಮಾಲಿನಿ’ ಅವರ ಕವನ ಸಂಕಲನ. ’ಬರ್ಥ್ ಆಫ್ ಹೋಪ್, ಅಲೆಯ ಆಲಾಪ, ಅಂತರಂಗಯಾನ, ಸ್ವರ್ಣ ಸಂಪಿಗೆ’ ಹೈಕುಗಳ ಕೃತಿ. ’ಮಿನುಗು ದೀಪ ಹನಿಗವನಗಳು, ಋತುಗಾನ’ ಅವರ ಮತ್ತಿತರ ಕೃತಿಗಳು. ‘ಸ್ಪಿಂಗ್ ಅವಾರ್ಡ್, ಸರ್ ಎಮ್. ವಿಶ್ವೇಶ್ವರಯ್ಯ ಪ್ರತಿಷ್ಠಾನದಿಂದ ಕಾವ್ಯಶ್ರೀ ಪ್ರಶಸ್ತಿ, ಕುವೆಂಪು ಪ್ರಶಸ್ತಿ, ಗಾರ್ಡನ್ ಆಫ್ ಪೊಯಟ್’ ಮುಂತಾದ ಗೌರವ ಪುರಸ್ಕಾರಗಳು ಸಂದಿವೆ. 

ಪರಿಮಳಾ ರಾವ್ ಜಿ.ಆರ್

(06 Jan 1941)