About the Author

ಲೇಖಕಿ, ಪೂರ್ಣಿಮಾ ಸುರೇಶ್ ಅವರು ಮೂಲತಃ ಉಡುಪಿ ಜಿಲ್ಲೆಯ ಹಿರಿಯಡಕದವರು. ಕನ್ನಡ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕನ್ನಡ ಮತ್ತು ಕೊಂಕಣಿ ಭಾಷೆಗಳಲ್ಲಿ ಕಿರುತೆರೆ, ನಾಟಕ, ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಇಪ್ಪತ್ತೈದು ವರ್ಷಗಳಿಂದ ತೊಡಗಿಕೊಂಡಿದ್ದಾರೆ. ಮಂಗಳೂರು ಆಕಾಶವಾಣಿಯಲ್ಲಿ ನಾಟಕದ ಬಿ ಗ್ರೇಡ್ ಕಲಾವಿದೆಯೂ ಆಗಿದ್ದಾರೆ. ಸಂಘಟಕಿ ಹಾಗೂ ನಿರೂಪಕಿಯಾಗಿರುವ ಅವರು ದೇಶವಿದೇಶಗಳಲ್ಲಿ ಪ್ರದರ್ಶನ ಕಂಡಿರುವ ಕನ್ನಡ ಮತ್ತು ಕೊಂಕಣಿ ಭಾಷೆಯ 25ಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿರುತ್ತಾರೆ. ಅವರ ‘ಸತ್ಯನಾಪುರದ ಸಿರಿ’ ನಾಡಿನುದ್ದಕ್ಕೂ ಸುಮಾರು 35 ಪ್ರದರ್ಶನಗಳನ್ನು ಕಂಡಿದೆ.

ಕರ್ನಾಟಕದ ಪ್ರಶಸ್ತಿಗಳು : ಗ್ಲೋಬಲ್ ಸಿನಿ ಬೆಸ್ಟ್ ಸರ್ಪೋಟಿಂಗ್ ನಟಿ ಪ್ರಶಸ್ತಿ, ಡಿ. ಎಸ್. ಮ್ಯಾಕ್ಸ್ ಪ್ರಶಸ್ತಿ( ಒಟ್ಟೂ ಸಾಹಿತ್ಯ ಸಾಧನೆ)

ಕೃತಿಗಳು: ಸುಭಾಷಿತ ಮಧುಸಂಚಯ, ಶಬ್ದಕೋಶ(ಕನ್ನಡ- ಕೊಂಕಣಿ), ಶಿವರಾತ್ರ್ (ಚಂದ್ರಶೇಖರ ಕಂಬಾರರ ಶಿವರಾತ್ರಿ ನಾಟಕದ ಕೊಂಕಣಿ ಅನುವಾದ)

ಪೂರ್ಣಿಮಾ ಸುರೇಶ್

BY THE AUTHOR