About the Author

ಪ್ರತಾಪ್ ಸಿಂಹ ಮೂಲತಃ ಸಕಲೇಶಪುರದವರು. ಪದವಿ ಪೂರ್ವ ಶಿಕ್ಷಣವನ್ನು ಚಿಕ್ಕಮಗಳೂರಿನಲ್ಲಿ ಮುಗಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿರುವ ಎಸ್.ಡಿ.ಎಂ ಕಾಲೇಜಿನಿಂದ ಮನಃಶಾಸ್ತ್ರ ಹಾಗೂ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ.

ಎಂಸಿಜೆ ಮಂಗಳೂರಿನಿಂದ ಪತ್ರಿಕೋದ್ಟಮದಲ್ಲಿ ಸ್ನಾತ್ತಕೋತ್ತರ ಪದವಿ ಹಾಗೂ ಎಂ ಐ ಸಿ ಇ ಮಂಗಳೂರಿನಿಂದ ಕಂಪ್ಯೂಟರ್ ಅಪ್ಲಿಕೇಷನ್ಸ್ ಡಿಪ್ಲೊಮಾ ಪೂರ್ಣಗೊಳಿಸಿದ್ದಾರೆ. 

ವಿಜಯ ಕರ್ನಾಟಕದಲ್ಲಿ ಬೆತ್ತಲೆ ಜಗತ್ತು, ಕನ್ನಡಪ್ರಭದಲ್ಲಿ ಸುದ್ದಿ ಸಂಪಾದಕರಾಗಿ ಬೆತ್ತಲೆ ಪ್ರಪಂಚ ಅಂಕಣ ಬರೆಯುತ್ತಿದ್ದರು.  ಬೆತ್ತಲೆ ಜಗತ್ತು- 14 ಪುಸ್ತಕಗಳು ( ಅಂಕಣ ಬರಹಗಳ ಸಂಗ್ರಹ), ನರೇಂದ್ರ ಮೋದಿ (ಯಾರೂ ತುಳಿಯದ ಹಾದಿ), ಟಿಪ್ಪು ಸುಲ್ತಾನ ಸ್ವಾತಂತ್ರವೀರನಾ, ಮೈನಿಂಗ್ ಮಾಫಿಯಾ, ಮೋದಿ ಮುಸ್ಲಿಂ ವಿರೋಧಿಯೇ ಅವರ ಪ್ರಕಟಿತ ಕೃತಿಗಳು.

ಪ್ರತಾಪ್ ಸಿಂಹ