About the Author

ಹಿರಿಯ ಪತ್ರಕರ್ತ ಹಾಗೂ ಲೇಖಕ ಪ್ರೇಮಕುಮಾರ ಹರಿಯಬ್ಬೆ ಅವರು ಮೂಲತಃ ಚಿತ್ರದುರ್ಗ ಜಿಲ್ಲೆಯ ಹರಿಯಬ್ಬೆ ಗ್ರಾಮದವರು. ಪ್ರಜಾವಾಣಿ ದಿನಪತ್ರಿಕೆಯಲ್ಲಿ ಉಪ ಸಂಪಾದಕರಾಗಿ ಅವರು ತಮ್ಮ ವೃತ್ತಿ ಜೀವನವನ್ನು ಆರಂಭಿಸಿ, ಬಳ್ಳಾರಿ ಹಾಗೂ ಧಾರವಾಡ ಜಿಲ್ಲಾ ವರದಿಗಾರರಾಗಿ, ನಂತರ ಪ್ರಜಾವಾಣಿ ಭಾನುವಾರದ ವಿಶೇಷ ಪುರವಣಿಯ ಸಂಪಾದಕರಾಗಿಯೂ ಸೇವೆ ಸಲ್ಲಿಸಿ ಸದ್ಯ ನಿವೃತ್ತರು. 

ಕೃತಿಗಳು: ಸತ್ತವರು (1980), ದೇವಕಣಗಿಲೆ (2010), ಅಕಾಲ(2021) ಇವು ಮೂರು ಕಥಾ ಸಂಕಲನಗಳು.

ಪ್ರಶಸ್ತಿ-ಪುರಸ್ಕಾರಗಳು: ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ  ಇವರಿಗೆ 2018ನೇ ಸಾಲಿನ ‘ವಾರ್ಷಿಕ ಪ್ರಶಸ್ತಿ’ ಲಭಿಸಿದೆ. 

ಪ್ರೇಮಕುಮಾರ್ ಹರಿಯಬ್ಬೆ

(07 May 1953)