About the Author

ಆರ್. ವಸಂತ್ ಕುಮಾರ್ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಸ್ನಾತಕೋತ್ತರ ಪದವಿ ಪಡೆದವರು.  ವಿಜಯ ಕರ್ನಾಟಕ ಪತ್ರಿಕಾ ಬಳಗದಲ್ಲಿ ಉಪ ಸಂಪಾದಕರಾಗಿ ವೃತ್ತಿ ಬದುಕನ್ನು ಆರಂಭಿಸಿದರು. ಪ್ರಸ್ತುತ ಜೈನ್ ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಸಹ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿರುವ ಇವರು ಕನ್ನಡ ಪುಸ್ತಕ ಪ್ರಾಧಿಕಾರದ 'ಪುಸ್ತಕ ಲೋಕ' ತ್ರೈಮಾಸಿಕ ಪತ್ರಿಕೆಯ ಸಂಪಾದಕರಾಗಿದ್ದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಕಟಿಸುತ್ತಿರುವ 'ವಾರ್ತಾಪತ್ರ' ದೈಮಾಸಿಕ ಪತ್ರಿಕೆಯ ಸಂಪಾದಕರಾಗಿದ್ದರು. ಕರ್ನಾಟಕ ಜಾನಪದ ವಿಶ್ವವಿದ್ಯಾಲಯವು ಹಮ್ಮಿಕೊಂಡಿದ್ದ 'ಗ್ರಾಮ ಚರಿತ್ರಕೋಶದ ಸಂಶೋಧಕರಾಗಿ ಕಾರ್ಯನಿರ್ವಹಿಸಿದ್ದಾರೆ. - ಪ್ರಸಕ್ತ ಕನ್ನಡ ಸಾಹಿತ್ಯ ಪರಿಷತ್ತಿನ 'ಕನ್ನಡ ನುಡಿ' ಮಾಸಪತ್ರಿಕೆಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 'ಬಹುಜನ ಕನ್ನಡಿಗರು' ಪಾಕ್ಷಿಕ ಪತ್ರಿಕೆಯ ಅಂಕಣಕಾರರಾಗಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆ ಉದಯಭಾನು ಕಲಾಸಂಘದ 'ಬೆಂಗಳೂರು ದರ್ಶನ' ಕೃತಿಗಳ ಸಂಯೋಜಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಂಕಣ ಬರಹಗಳು, ಚಿಂತನ ಬರಹಗಳು, ತೆರೆಮರೆ, ಮನದ ಮಾತು, ಮಂಥನ, ಕಡೆಗೋಲು, ಕರ್ನಾಟಕದ ಒಕ್ಕಲಿಗರು ಮುಂತಾದವುಗಳನ್ನು ಇವರು ಪ್ರಕಟ ಮಾಡಿದ್ದಾರೆ. 

ಆರ್. ವಸಂತ್ ಕುಮಾರ್