About the Author

 ರಾಘವೇಂದ್ರ ಡಿ ಆಲೂರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆಲೂರಿನಲ್ಲಿ. 1990 ಜೂನ್‌ 21 ರಂದು ಜನನ. ಮೈಸೂರಿನ ಕರ್ನಾಟಕ ಮುಕ್ತ ವಿ.ವಿ.ಯಿಂದ ವಾಣಿಜ್ಯ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಮತ್ತು ಕನ್ನಡ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅರೆಕಾಲಿಕ ಉಪನ್ಯಾಸಕರಾಗಿ, ಭಾರತೀಯ ಜೀವವಿಮಾ ಪ್ರತಿನಿಧಿಯಾಗಿಯೂ ಕೆಲಸ ನಿರ್ವಹಿಸಿದ್ದಾರೆ.

ಪ್ರವೃತ್ತಿಯಲ್ಲಿ ಹವ್ಯಾಸಿ ಯಕ್ಷಗಾನ ಕಲಾವಿದರು. ಅರೆಹೊಳೆ ಪ್ರತಿಷ್ಟಾನ ಮಂಗಳೂರು, ಅನಂತ ಪ್ರಕಾಶನ ಕಿನ್ನಿಗೋಳಿ ಮತ್ತು ಮಂಗಳೂರು ಆಕಾಶವಾಣಿಯ ಪ್ರಾಯೋಜಿತ 'ಪ್ರತಿಭಾನ್ವೇಷಣ- 2018' ರಾಜ್ಯ ಕವನ ಸ್ಪರ್ಧೆಯಲ್ಲಿ ಬಹುಮಾನ ಸಂದಿದೆ. ಅವರ ಚೊಚ್ಚಲ ಕವನ ಸಂಕಲನ ’ಅಂತರ್ಮುಖಿ’ ಪ್ರಕಟಗೊಂಡಿದೆ.

ರಾಘವೇಂದ್ರ ಡಿ. ಆಲೂರು

(21 Jun 1990)