About the Author

ರಾಜಶೇಖರ ಹಳೆಮನೆ ಅವರು ಸೂಕ್ಷ್ಮ ಸಂವೇದನೆಯ ಕತೆಗಾರ ಹಾಗೂ ಅಪರೂಪದ ಒಳನೋಟಗಳುಳ್ಳ ವಿಮರ್ಶಕರು ಎಂದೇ ಪ್ರಸಿದ್ಧರು. ವಿಜಯ ಕರ್ನಾಟಕ, ಅಕ್ಷಯ ಮತ್ತು ಕರ್ಮವೀರ ಕಥಾ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡಿಸಿದ್ದಾರೆ.

ಕೇಂದ್ರ ಸಾಹಿತ್ಯ ಅಕಾಡಮಿಯು ಸಂಯೋಜಿಸಿದ ಸಮಾವೇಶದಲ್ಲಿ ಅವರು ಕರ್ನಾಟಕವನ್ನು ಪ್ರತಿನಿಧಿಸಿದ್ದಾರೆ. ಈ ತನಕ ಪ್ರಕಟಿಸಿದ ಮೂರು ಕೃತಿಗಳನ್ನು ಪ್ರಕಟಿಸಿದ್ದಾರೆ. ಅವರಿಗೆ 2019ನೇ ಸಾಲಿನ ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ ಸಂದಿದೆ.

ರಾಜಶೇಖರ ಹಳೆಮನೆ