About the Author

‘ರಾಜಶೇಖರ ಕುಕ್ಕುಂದಾ’ ಕಾವ್ಯನಾಮದೊಂದಿಗೆ ಬರೆಯುವ ರಾಜಶೇಖರ ಅಲ್ಲೂರಕರ್ ಅವರು ಮೂಲತಃ ಬಾಗಲಕೋಟೆಯ ಬಸವೇಶ್ವರ ಎಂಜಿನೀಯರಿಂಗ್ ಕಾಲೇಜಿನಲ್ಲಿ ಸಂಯೋಜಿತ ಪ್ರಾಧ್ಯಾಪಕರು. ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಸದಸ್ಯರಾಗಿದ್ದರು. 

ಕೃತಿಗಳು:  ಚೆಲುವ ಚಂದಿರ,  ಗೋಲಗುಮ್ಮಟ, ಮತ್ತು ಪುಟಾಣಿ ಪ್ರಾಸಗಳು (ಮಕ್ಕಳ ಕವನ ಸಂಕಲನಗಳು), ತಾಂತ್ರಿಕ ವಿಷಯಗಳ ಪುಸ್ತಕಗಳನ್ನು ರಚಿಸಿದ್ದಾರೆ. ಅವರ ಕವಿತೆಗಳು ಸಿ. ಬಿ. ಎಸ್. ಇ. ಕನ್ನಡ ಭಾಷೆಯ ಪಠ್ಯದಲ್ಲಿ, ಕರ್ನಾಟಕ ಮತ್ತು ಮಹಾರಾಷ್ಟ್ರದ ಪಠ್ಯಪುಸ್ತಕಗಳಲ್ಲಿ ಮತ್ತು ಶಿಶುಗೀತೆಯ ಅಲ್ಬಂಗಳಲ್ಲಿ ಸೇರಿವೆ. ಕವಿತೆಗಳು ಮತ್ತು ಲೇಖನಗಳು ಕನ್ನಡ ದಿನ ಪತ್ರಿಕೆಗಳಲ್ಲಿ ಮತ್ತು ನಿಯತಕಾಲಿಕೆಗಳಲ್ಲಿ ಬೆಳಕು ಕಂಡಿವೆ; ಆಕಾಶವಾಣಿಯಲ್ಲಿ ಮಕ್ಕಳ ಧಾರಾವಾಹಿ ಮತ್ತು ಕವಿತೆಗಳು ಪ್ರಸಾರಗೊಂಡಿವೆ.

ಪುರಸ್ಕಾರಗಳು: ಪ್ರಜಾವಾಣಿ ದಿನಪತ್ರಿಕೆಯ ದೀಪಾವಳಿ ಶಿಶು ಕಾವ್ಯ ಸ್ಪರ್ಧೆಯಲ್ಲಿ ಹಲವು ಬಾರಿ ಬಹುಮಾನ, ಶಿವಮೊಗ್ಗದ ಕರ್ನಾಟಕ ಸಂಘವು ಮಕ್ಕಳ ಸಾಹಿತ್ಯಕ್ಕೆ ನೀಡುವ 2012 ನೇ ಸಾಲಿನ ‘ನಾ ಡಿಸೋಜಾ’ ಪುರಸ್ಕಾರ, 2013 ನೇ ಸಾಲಿನ ‘ಅಮ್ಮ’ ಪುರಸ್ಕಾರ ಪಡೆದಿದ್ದಾರೆ.

ರಾಜಶೇಖರ ಕುಕ್ಕುಂದಾ