About the Author

ರಾಜು ಹೆಗಡೆ ಅವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಾಗೋಡು ಗ್ರಾಮದವರು. 1964 ರ ಜುಲೈ  17ರಂದು ಜನಿಸಿದರು.  ಶಿರಸಿಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿರುವ ರಾಜು ಹೆಗಡೆ, ಮನುಷ್ಯ ಸಂಬಂಧಗಳ ಬದಲಾಗುವ ಭಾವಗಳನ್ನು ಕುರಿತು ಕಥೆ ಕವನ ಬರೆಯುವುದರಲ್ಲಿ ವಿಶೇಷ ಆಸಕ್ತಿ ವಹಿಸುತ್ತಾರೆ.

ಪ್ರಕಟಿತ ಕೃತಿಗಳು- ಪಾಯಸದ ಗಿಡ, ಅಂಗಳದಲ್ಲಿ ಆಕಾಶ, ಟೊಂಗೆಯಲ್ಲಿ ಸಿಕ್ಕ ನಕ್ಷತ್ರ (ಕವನ ಸಂಕಲನಗಳು), ಅಪ್ಪಚ್ಚಿ (ಕಥಾ ಸಂಕಲನ), ಹಳವಂಡ (ಲಘು ಬರಹಗಳ ಸಂಕಲನ), ಗಿರೀಶ್ ಕಾರ್ನಾಡರ ಸಮಗ್ರ ನಾಟಕಗಳ ಸಮೀಕ್ಷೆ (ವಿಮರ್ಶೆ), ಜಿ.ಎಸ್. ಅವಧಾನಿ ಕವಿತೆಗಳು (ಸಂಪಾದನೆ).

 

ರಾಜು ಹೆಗಡೆ

(17 Jul 1964)

BY THE AUTHOR