About the Author

ರವಿ ಶಿವರಾಯಗೊಳ ಅವರು ಮೂಲತಃ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ತ ತಾಲೂಕಿನ ಭೀವರ್ಗಿ ಎಂಬ ಪುಟ್ಟ ಹಳ್ಳಿಯವರು. ಡಿಪ್ಲೋಮಾ ವಿದ್ಯಾರ್ಹತೆಯನ್ನು ಪಡೆದಿರುವ ಅವರು ಸದ್ಯ ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ. ಸಾಹಿತ್ಯ ಕ್ಷೇತ್ರ ಅವರ ಆಸಕ್ತಿಯಾಗಿದೆ. ದಿನಪತ್ರಿಕೆಗಳಾದ ವಿಶ್ವವಾಣಿ, ಕರ್ಮವೀರ, ಉದಯವಾಣಿ, ಓ ಮನಸೇ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ಕವಿತೆ, ಕವನ, ಕಥೆ, ಲೇಖನ ಪ್ರಕಟಗೊಂಡಿರುತ್ತದೆ.

ರವಿ ಶಿವರಾಯಗೊಳ