About the Author

ರಾಯಸಾಬ ಎನ್ ದರ್ಗಾದವರ ಅವರು ಮೂಲತಃ ಹುಬ್ಬಳ್ಳಿ ತಾಲೂಕಿನ ಕಟ್ನೂರು ಗ್ರಾಮದವರು. ವೃತ್ತಿಯಿಂದ ಹುಬ್ಬಳ್ಳಿ ಶಹರದ ಪೊಲೀಸ್ ಸಶಸ್ತ್ರ ಮೀಸಲು ಪಡೆಯ ಪೇದೆಯಾಗಿ 2012 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಹುಬ್ಬಳ್ಳಿ ನೆಹರು ಕಾಲೇಜಿನಿಂದ ಪದವೀಧರರು. ಕತೆ, ಕವಿತೆ ಬರೆಯುವ ಮೂಲಕ ಸಾಹಿತ್ಯಿಕವಾಗಿ ತಮ್ಮನ್ನುಗುರುತಿಸಿಕೊಂಡಿದ್ದಾರೆ. ದಿನಪತ್ರಿಕೆ, ವೆಬ್ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.  ಅವರ ಕವಿತೆಗಳು "ಕಾವ್ಯದ ಹುಳು"ತಂಡದವರು ನಡೆಸಿಕೊಡುವ 'ಚಿತ್ರ ನೋಡಿ ಕವಿತೆ ಬರೆಯಿರಿ' ಸ್ಪರ್ಧೆಯಲ್ಲಿ ದ್ವಿತೀಯ ಮತ್ತು ಕನ್ನಡ ಕಲರವ ಮತ್ತು ಅವ್ವ ಪುಸ್ತಕಾಲಯದವರು ನಡೆಸಿದ ಕಾವ್ಯ ಸ್ಪರ್ಧೆಯಲ್ಲಿ ಟಾಪ್ 5 ಸರಣಿಯಲ್ಲಿ ಬಹುಮಾನ ಪಡೆದಿವೆ.

ರಾಯಸಾಬ ಎನ್ ದರ್ಗಾದವರ