About the Author

ಲೇಖಕಿ ರೇಖಾ ವಿ.ಬನ್ನಾಡಿ ಅವರು ಮೂಲತಃ ಕುಂದಾಪುರ ತಾಲೂಕಿನ ಗುಲ್ವಾಡಿಯವರು. ಬಸ್ರೂರು ಶ್ರೀ ಶಾರಾದಾ ಕಾಲೇಜಿನಲ್ಲಿ ಪದವಿ ಪಡೆದ ಅವರು, ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎ. ಹಾಗೂ ಪಿಎಚ್.ಡಿ ಪದವಿಗಳನ್ನು ಪಡೆದಿದ್ದಾರೆ. ಪ್ರಸ್ತುತ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅವರು ಸಾಹಿತ್ಯ ರಚನೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಲೀಲಾ ಕಾರಂತ, ವಿಜ್ಞಾನ ಸಾಹಿತ್ಯ(ಸಂ), ಕಾರಂತ ದುಡಿಮೆ ಪ್ರಪಂಚ ಕೃತಿಗಳನ್ನು ಪ್ರಕಟಿಸಿದ್ದಾರೆ. ’ಕಾರಂತ ದುಡಿಮೆ ಪ್ರಪಂಚ’ ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಮಲ್ಲಿಕಾ ದತ್ತಿ ಸಾಹಿತ್ಯ ಪ್ರಶಸ್ತಿ ದೊರೆತಿದೆ. ಪ್ರಸ್ತುತ ರೇಖಾ ವಿ. ಬನ್ನಾಡಿ ಅವರು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 

ರೇಖಾ ವಿ. ಬನ್ನಾಡಿ