About the Author

ರೇಣುಕಾ ನಿಡಗುಂದಿಯವರು ಮೂಲತಹ ಧಾರವಾಡದವರು. ಮೂರು ದಶಕದಿಂದಲೂ ದೆಹಲಿಯಲ್ಲಿ ವಾಸ, ಖಾಸಗೀ ಕಂಪನಿಯೊಂದರಲ್ಲಿ ಉದ್ಯೋಗ, ದೆಹಲಿ ಕರ್ನಾಟಕ ಸಂಘದ 'ಮುಖವಾಣಿ 'ಅಭಿಮತ' ದ ಸಂಪಾದಕ ಬಳಗದಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಿದ್ದಾರೆ, ಡಾ.ಪುರುಷೋತ್ತಮ ಬಿಳಿಮಲೆಯವರ ಸಂಪಾದಕತ್ವದಲ್ಲಿ " ರಾಜಧಾನಿಯಲ್ಲಿ ಕರ್ನಾಟಕ" ಪುಸ್ತಕವನ್ನು ಸಂಪಾದಿಸಿದ್ದು ಅನೇಕ, ಕಥೆ, ಕವನ, ಲೇಖನಗಳು ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಮಾಸಿಕಗಳಲ್ಲಿ ಪ್ರಕಟಗೊಂಡಿವೆ.

'ಓ ಮನಸೇ' ದೈಮಾಸಿಕ ಪತ್ರಿಕೆಯಲ್ಲಿ 'ರಾಜಧಾನಿ ಮೇಲ್' ಅಂಕಣ ಬರೆಹ ಬರೆಯುತ್ತಿದ್ದರು. ಬಿಡುಗಡೆಯಾದ ಕೃತಿಗಳು - ಮೊದಲ ಕವನ ಸಂಕಲನ " ಕಣ್ಣ ಕಣಿವೆ" 2008 ( ಪ್ರಗತಿ ಗ್ರಾಫಿಕ್ಸ್), “ದಿಲ್ಲಿ ಡೈರಿಯ ಪುಟಗಳು-2014 ( 'ಕೆಂಡಸಂಪಿಗೆ'ಯಲ್ಲಿನ ಪ್ರಬಂಧ ಬರೆಹಗಳು), " "ಅಮೃತ ನೆನಪುಗಳು" ಅಮೃತಾ ಪ್ರೀತ್‌ಂರ ಜೀವನಗಾಥೆ ಇಮೋಜ್ ಕಂಡಂತೆ (ಅಹರ್ನಿಶಿ ಪ್ರಕಾಶನ- 2015)”, “ನಮ್ಮಿಬ್ಬರ ನಡುವೆ” ಕವನ ಸಂಕಲನ ( ದೆಹಲಿ ಕರ್ನಾಟಕ ಸಂಘ-2017). 2018ರ ಪ್ರಜಾವಾಣಿ ಸಂಕ್ರಾಂತಿ ಪ್ರಬಂಧ ಸ್ಪರ್ಧೆಯಲ್ಲಿ ಎರಡನೆ ಬಹುಮಾನ, ಪ್ರೇಮಪತ್ರ ಸ್ಪರ್ಧೆಯಲ್ಲಿ - ಮೊದಲ ಬಹುಮಾನ, ಪ್ರಸ್ತುತ ಪ್ರಜಾವಾಣಿಯಲ್ಲಿ ಮಾಸಿಕ 'ಸ್ಪಂದನ' ಅಂಕಣ ಬರೆಯುತ್ತಿದ್ದಾರೆ. ಇವರ ಹಲವಾರು ಬರಹಗಳು ಕನ್ನಡದ ದಿನಪತ್ರಿಕೆಗಲ್ಲಿ ಪ್ರಕಟವಾಗಿವೆ.  

ರೇಣುಕಾ ನಿಡಗುಂದಿ