About the Author

ಎಸ್.ಕೆ.ಶಿವಕುಮಾರ್‌ ಅವರು ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದವರು. ಇವರು ಹಾಸನದ ಎನ್.ಡಿ.ಆರ್.ಕೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ. ಪದವಿ ವ್ಯಾಸಂಗ ಮಾಡಿ ನಂತರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಇತಿಹಾಸ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಎಂ.ಎಡ್ ಪದವಿ ಪಡೆದಿದ್ದಾರೆ. ಜೊತೆಗೆ ಡಾ.ಬಿ.ಆರ್.ಅಂಬೇಡ್ಕರ್‌ ಅಧ್ಯಯನ ಮತ್ತು ಸಂಶೋಧನ ಕೇಂದ್ರ, ಮೈಸೂರಿನಲ್ಲಿ ಪಿ.ಜಿ ಡಿಪ್ಲೊಮೊ ಪದವಿಯನ್ನು ಪಡೆದಿದ್ದಾರೆ. ಪ್ರಸ್ತುತ ಹಾಸನದ ಎನ್.ಡಿ.ಆರ್.ಕೆ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಹಲವು ಪುಸ್ತಕಗಳನ್ನು ಬರೆದಿದ್ದು, ಕರ್ನಾಟಕ ರಾಜ್ಯದಾದ್ಯಂತ ಹಲವು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರಗಳಲ್ಲಿ ಸಾಮಾನ್ಯ ಜ್ಞಾನ, ಭಾರತದ ಇತಿಹಾಸ, ಹಾಗೂ ಭಾರತದ ಸಂವಿಧಾನ ವಿಷಯಕ್ಕೆ ಸಂಬಂಧಿಸಿದಂತೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುತ್ತಾರೆ. ಅಲ್ಲದೇ ಹಲವು ಕೃತಿಗಳನ್ನು ರಚಿಸಿದ್ದಾರೆ.

ಎಸ್.ಕೆ. ಶಿವಕುಮಾರ್‌