About the Author

ವಿರಾಜಪೇಟೆಯ ವೈದ್ಯ ಡಾ. ಎಸ್.ವಿ. ನರಸಿಂಹನ್ ಪಕ್ಷಿ ತಜ್ಞರೂ ಹಾಗೂ  ಪರಿಸರ ಸಂವಹನಕಾರರೂ ಹೌದು. 

ವೃತ್ತಿಯಲ್ಲಿ ವೈದ್ಯರಾಗಿರುವ  ಎಸ್. ವಿ. ನರಸಿಂಹನ್ ಪರಿಸರ ಪ್ರೇಮಿ ಹಾಗೂ ಅತ್ಯುತ್ತಮ ಚಿತ್ರಕಾರರು. ಅವರು ಪ್ರತಿ ವರ್ಷ ವನ್ಯಜೀವಿ ಸಂದೇಶಗಳಿರುವ ಸಾವಿರಾರು ಕಾರ್ಡುಗಳನ್ನು ಗೆಳೆಯರಿಗೆ, ಆಸಕ್ತರಿಗೆ ಅಕ್ಟೋಬರ್ ನಲ್ಲಿ `ವನ್ಯಜೀವಿ ಸಪ್ತಾಹ’ದ ಸಮಯದಲ್ಲಿ ಕಳುಹಿಸುವ ಯೋಜನೆ ಹಾಕಿಕೊಂಡಿದ್ದಾರೆ. 

 ಆ ಕಾರ್ಡುಗಳಲ್ಲಿ ಪಕ್ಷಿ, ಪ್ರಾಣಿಗಳ ಚಿತ್ರಗಳನ್ನು ಅತ್ಯದ್ಭುತವಾಗಿ ರಚಿಸಿರುತ್ತಾರೆ. ಅವು ಸಂಗ್ರಹಿಸಬಲ್ಲ ಸುಂದರ ಕಾರ್ಡುಗಳು. ಅವರ ನಿಸರ್ಗ ಪ್ರೇಮ ಹಾಗೂ ಅದಕ್ಕಾಗಿ ಅವರು ವಹಿಸುವ ಶ್ರಮದ ಬಗ್ಗೆ ಮೆಚ್ಚುವಂತದ್ದು. 

 

ಎಸ್. ವಿ. ನರಸಿಂಹನ್