About the Author

ಲೇಖಕ ಸಚಿನ್ ಕೃಷ್ಣ ಅವರು ಮೂಲತಃ ಬೆಂಗಳೂರಿನವರು. ಪ್ರಾಥಮಿಕ ಶಿಕ್ಷಣವನ್ನು ಕುಣಿಗಲ್ ಮತ್ತು ಕೋಲಾರದಲ್ಲಿ, ಪ್ರೌಢಶಿಕ್ಷಣವನ್ನು ಬೆಂಗಳೂರಿನ ಅಗ್ರಹಾರದ ದಾಸರಹಳ್ಳಿಯ ಸರ್ಕಾರಿ ಶಾಲೆಯಲ್ಲಿ , ಬಸವೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ, ಬಸವೇಶ್ವರ ವಾಣಿಜ್ಯ ಕಲಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಪದವಿಯನ್ನು ಹಾಗೂ ಬೆಂಗಳೂರು ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡದಿದ್ದಾರೆ. ಕನ್ನಡ ವಿಷಯದಲ್ಲಿ ಮೂರು ಚಿನ್ನದ ಪದಕವನ್ನು ಪಡೆದಿರುವ ಅವರು ಅಗ್ನಿ ವಾರಪತ್ರಿಕೆಯಲ್ಲಿ ಉಪಸಂಪಾದಕರಾಗಿ ವೃತ್ತಿಜೀವನವನ್ನು ಆರಂಭಿಸಿ, ‘ವಿಜಯ ಕರ್ನಾಟಕದಲ್ಲಿ’ ಪತ್ರಿಕಾ ತರಬೇತಿ, ‘ವಿಶ್ವವಾಣಿ’ ಪತ್ರಿಕೆಯ ಪುರವಣಿ ವಿಭಾಗದಲ್ಲಿ ಉಪಸಂಪಾದಕ, ‘ಸಿನಿಬಜ್’ ವೆಬ್ ಸೈಟ್ ನಲ್ಲಿ ಉಪಸಂಪಾದಕರಾಗಿ ಕೆಲಸ. ದ್ರಾವಿಡ ವಿಶ್ವವಿದ್ಯಾಲಯದ ಕನ್ನಡ ಭಾಷೆ ಮತ್ತು ಅನುವಾದ ಅಧ್ಯಯನ ವಿಭಾಗದಲ್ಲಿ ಕನ್ನಡ ಎಂ.ಎ ಸ್ನಾತಕೋತ್ತರ ಪದವಿ ಹಾಗೂ ವಿಭಾಗವು ಹೊರತರುತ್ತಿದ್ದ ‘ಸಿರಿಗನ್ನಡ’ ಪಾಕ್ಷಿಕ ಪತ್ರಿಕೆಯ ಪತ್ರಿಕಾ ಸಂಪಾದಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ.  ಕೃತಿಗಳು: ಅಕ್ಕರೆಯ ಅಪ್ಪುಗೆ.

ಸಚಿನ್ ಕೃಷ್ಣ