ಸಂಪತ್ ಸಿರಿಮನೆ ಮೂಲತಃ ಕೊಪ್ಪದವರು. ಚಿಕ್ಕಮಗಳೂರಿನ ಕೊಪ್ಪದಲ್ಲಿ ಶಾಲೆ ಹಾಗೂ ಕಾಲೇಜು ವಿದ್ಯಾಭ್ಯಾಸ ಮುಗಿಸಿದ್ದಾರೆ. ಮಂಡ್ಯದ ಆದಿಚುಂಚನಗಿರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಮಾಡಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದು, ಹಿಂದೆ ಐಟಿ ಕಂಪನಿಯೊಂದರಲ್ಲಿ ಕಾರ್ಯನಿರ್ವಹಿಸಿದ್ದಾರೆ. ಇದೀಗ ಸಿನಿಮಾ ಕ್ಷೇತ್ರದಲ್ಲಿ ತಮ್ಮದೇ ಛಾಪನ್ನು ಮೂಡಿಸುತ್ತಿದ್ದಾರೆ. ಗಂಧದ ಗುಡಿ, ಒಂದಲ್ಲ ಎರಡಲ್ಲ ಸೇರಿದಂತೆ ಹಲವು ಸಿನಿಮಾಗಳಿಗೆ ಬರಹರಾರಾಗಿದ್ದಾರೆ. ಇವರ ಮೊದಲ ಕೃತಿ ʻಲೆಟ್ಸ್ ಬ್ರೇಕಪ್ʼ.