About the Author

ಅಭಿವೃದ್ಧಿ ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಇರುವ ಸತ್ಯಾ ಎಸ್ ಆವರು ಮೂಲತಃ ಪತ್ರಕರ್ತೆ. ಮುಖ್ಯವಾಹಿನಿ ಪತ್ರಿಕೋದ್ಯಮ ತೊರೆದು ಸ್ವಲ್ಪ ಕಾಲ ಸಂಶೋಧನೆ, ಬರವಣಿಗೆಗಳಲ್ಲಿ ತೊಡಗಿಸಿಕೊಂಡವರು. ಇತ್ತೀಚಿನ ವರ್ಷಗಳಲ್ಲಿ ಸ್ವತಂತ್ರ ಸಂವಹನ ಸಮಾಲೋಚಕರಾಗಿ ಗ್ರಾಮೀಣ ಅಭಿವೃದ್ಧಿ, ಪಂಚಾಯತ್ ರಾಜ್, ಶಿಕ್ಷಣ, ಆರೋಗ್ಯ, ಇತ್ಯಾದಿ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಮಹಿಳಾಪರ ಹಾಗೂ ಕೋಮುವಾದ ವಿರೋಧಿ ಚಳವಳಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯ ಅನುಷ್ಠಾನ ಪ್ರಕ್ರಿಯೆಯನ್ನು ದಾಖಲಿಸುವ ಪ್ರಯತ್ನ ನಡೆಸಿದ್ದಾರೆ. ’ನೆಲದ ಸಿರಿ’ ಇವರ ಸಂಪಾದಿತ ಕೃತಿ.

ಸತ್ಯಾ ಎಸ್.