About the Author

ಉತ್ತರ ಕನ್ನಡ ಮೂಲದ ಡಾ. ಸೀತಾಲಕ್ಷ್ಮಿ ಕರ್ಕಿಕೋಡಿ ಅವರು ಜನಿಸಿದ್ದು ದಕ್ಷಿಣ ಕನ್ನಡದ ಅಡ್ಯನಡ್ಕದಲ್ಲಿ. ಅಡ್ಯನಡ್ಕ, ಪುತ್ತೂರುಗಳಲ್ಲಿ ಪ್ರಾಥಮಿಕ, ಪ್ರೌಢ, ಕಾಲೇಜು ವಿದ್ಯಾಭ್ಯಾಸ ಪೂರೈಸಿರುವ ಅವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿ ಪಡೆದರು. 'ಮಾಸ್ತಿಯವರ ಕತೆಗಳಲ್ಲಿ ಸ್ತ್ರೀ ಪ್ರತಿನಿಧೀಕರಣ' ಎಂಬ ಮಹಾಪ್ರಬಂಧ ರಚಿಸಿ ಹಂಪಿ ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿ ಪಿಎಚ್.ಡಿ. ಪದವಿ ಪಡೆದಿದ್ದಾರೆ. 'ಪರಾಮರ್ಶೆ' ಎಂಬ ವಿಮರ್ಶಾ ಸಂಕಲನ ಪ್ರಕಟಿಸಿರುವ ಅವರು 'ವಿಜಯ ಕರ್ನಾಟಕ' ದಿನಪತ್ರಿಕೆಯಲ್ಲಿ ಪತ್ರಕರ್ತರಾಗಿದ್ದರು. 12-05-2020 ರಂದು ಸೀತಾಲಕ್ಷ್ಮಿ ಅವರು ನಿಧನರಾದರು.

ಸೀತಾಲಕ್ಷ್ಮೀ ಕರ್ಕಿಕೋಡಿ