About the Author

ಕವಯತ್ರಿ ಶಾಂತಾ ಜಯಾನಂದ್ ಅವರು ಮೂಲತಃ ಚಿಕ್ಕಮಗಳೂರು . ಜಿಲ್ಲೆಯ ತರೀಕೆರೆಯವರು. ಶಿವಮೊಗ್ಗದಲ್ಲಿಯೇ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ಶಿಕ್ಷಣ ಪೂರೈಸಿದರು. ಬಾಲ್ಯದಿಂದಲೇ ಸಾಹಿತ್ಯ, ಕ್ರೀಡೆ, ನಾಟಕ ಮತ್ತು ಗಾಯನದಲ್ಲಿ ಆಸಕ್ತಿ. ಕಾಲೇಜು ದಿನಗಳಲ್ಲಿಯೇ ಸಾಹಿತ್ಯ ರಚನೆಯಲ್ಲಿ ತೊಡಗಿಕೊಂಡಿದ್ದ ಶಾಂತಾ ಜಯಾನಂದ್ ಅವರು ಸಾಹಿತ್ಯಿಕ ಚರ್ಚೆ, ಸಂಗೀತ, ಕಾವ್ಯರಚನೆ ಮುಂತಾದ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು. ಸಮಾಜಶಾಸ್ತ್ರ ಮತ್ತು ಕನ್ನಡ ಸಾಹಿತ್ಯದಲ್ಲಿ ಎಂ. ಎ ಪದವೀಧರರು. ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಎಂ. ಫಿಲ್ ಪದವಿ ಪೂರೈಸಿದ್ದಾರೆ. ದೂರದರ್ಶನದ ಚಂದನವಾಹಿನಿಯಲ್ಲಿ ನಿರೂಪಕಿಯಾಗಿ ಹಾಗೂ  ಡಾಕ್ಯುಮೆಂಟರಿ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಎಂ.ಎಸ್ ರಾಮಯ್ಯ ಕಾನೂನು ಮತ್ತು ಮ್ಯಾನೇಜ್ ಮೆಂಟ್ ಕಾಲೇಜು ಹಾಗೂ ಇಂಡಿಯನ್ ಅಕಾಡೆಮಿ ಕಾಲೇಜುಗಳಲ್ಲಿ ಅಧ್ಯಾಪಕರಾಗಿದ್ದಾರೆ. 

ಕೃತಿಗಳು: ಹುದುಗಿಟ್ಟ ಭಾವಗಳ ಮತ್ತೆ ನುಡಿಸಿ (ಕವನ ಸಂಕಲನ)

ಶಾಂತಾ ಜಯಾನಂದ್

BY THE AUTHOR