About the Author

ಕವಿಯತ್ರಿ ಶಾಂತಾ ಪಸ್ತಾಪುರ ಮೂಲತಃ ಬೀದರದವರು. ತಂದೆ ರಾಚಪ್ಪ ಭಂಡಾರ, ತಾಯಿ ಮಹಾದೇವಿ  ಭಂಡಾರ. ಎಸ್.ಎಸ್.ಎಲ್.ಸಿ.ವರೆಗೆ ಶಿಕ್ಷಣ. ಕಲಬುರಗಿಯಲ್ಲಿ ವಾಸವಿದ್ದಾರೆ.

ಕೃತಿಗಳು: ಮನದಾಳದ ಮಾತು (ಕವನ ಸಂಕಲನ) ಪಯಣ (ಪ್ರವಾಸ ಕಥನ), ನೆನಪಿನಂಗಳ (ಕವನ ಸಂಕಲನ), ಕುಸುಮ ಬಾಲೆ (ಕವನ ಸಂಕಲನ),  ಗೆಳೆತಿಯರ ದಂಡು ಯೂರೋಪ್ ಗೆ ಹೋಗಿದ್ದು (ಪ್ರವಾಸ ಕಥನ), ಬದುಕೇ ಒಂದು ಕಥೆ (ಕಥಾ ಸಂಕಲನ), ಅನುಭವ -ಅಭಿವ್ಯಕ್ತಿ ಮತ್ತು ಚಿಂತನ (ಲಲಿತ ಪ್ರಬಂಧಗಳು) ,  ಕಾವ್ಯಧಾರೆ (ಅವರು ರಚಿಸಿ, ಹಾಡಿದ ಧ್ವನಿ ಸುರುಳಿ) 

ಪ್ರಶಸ್ತಿ-ಪುರಸ್ಕಾರಗಳು: ಬದುಕೆ ಒಂದು ಕಥೆ ಕಥಾ ಸಂಕಲನಕ್ಕೆ ಶ್ರೇಷ್ಠ ಸಾಹಿತ್ಯ ಕೃತಿ ಪ್ರಶಸ್ತಿ, ಅಖಿಲ ಭಾರತ ಕವಯತ್ರಿಯರ ಸಮ್ಮೇಳನದಲ್ಲಿ ಅಕ್ಕಮಹಾದೇವಿ ಪ್ರಶಸ್ತಿ, ಧಾರವಾಡದ ಅವನಿರಸಿಕರ ರಂಗ ಸಂಸ್ಥೆಯಿಂದ ರಾಜ್ಯಮಟ್ಟದ ದೇವಾಂಗನಾ ಪ್ರಶಸ್ತಿ, ಹೀಗೆ ಹಲವು ಪ್ರಶಸ್ತಿ-ಪುರಸ್ಕಾರಗಳು ಲಭಿಸಿವೆ. 

ಶಾಂತಾ ಪಸ್ತಾಪುರ

(12 Mar 1949)