About the Author

ಮೂಲತಃ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಾದಾಪಟ್ಟಣದವರಾದ ಶರತ್‌ ಎಂ.ಎಸ್‌ ಪತ್ರಕರ್ತರು. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎ ಪತ್ರಿಕೋದ್ಯಮ ಮಾಡಿದ್ದಾರೆ. 2007 ರಿಂದ ಮಾಧ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ದಿನಪತ್ರಿಕೆ ಹಾಗೂ ಟೆಲಿವಿಷನ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಷೇರು ಮಾತು ಅಂಕಣ ಹೆಚ್ಚು ಜನಪ್ರಿಯವಾಗಿತ್ತು. ನಾಲ್ಕು ವರ್ಷಗಳ ಕಾಲ ಹಣಕಾಸು ಶಿಕ್ಷಣ ಸಂಸ್ಥೆಯಲ್ಲಿ ಕೆಲಸ ಮಾಡಿದ್ದಾರೆ. ಮಾರುಕಟ್ಟೆಯ ಆಗು ಹೋಗುಗಳ ಕುರಿತು ಹೆಚ್ಚು ಅಧ್ಯಯನ ಹಾಗೂ ಸಲಹೆಗಳನ್ನು ನೀಡುತ್ತಿದ್ದಾರೆ. ಸಾಮಾನ್ಯ ಜನರಿಗೆ ಕನ್ನಡ ಭಾಷೆಯಲ್ಲಿ ಮಾರುಕಟ್ಟೆ ಆಳ ಮತ್ತು ವಿಸ್ತಾರದ ಅರಿವು ಮೂಡಿಸುವುದು ಇವರ ಮುಖ್ಯ ಉದ್ದೇಶ. ಪ್ರಸ್ತುತ ವಿಸ್ತಾರ ಡಿಜಿಟಲ್‌ ಮೀಡಿಯಾದಲ್ಲಿ ಕಾರ್ಯಕಾರಿ ಸಂಪದಾಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಮಗ್ರ ಹಣಕಾಸು ಹೂಡಿಕೆ ಮಾರ್ಗದರ್ಶಿಯನ್ನು "ಸ್ಟಾಕ್ ಮಾರ್ಕೆಟ್ ಸೀಕ್ರೆಟ್ಸ್ " ಪುಸ್ತಕ ರೂಪದಲ್ಲಿ ಹೊರತಂದಿದ್ದಾರೆ.

ಶರತ್‌ ಎಂ ಎಸ್

(19 May 1986)