About the Author

ಕವಯತ್ರಿ ಶಿವಲೀಲಾ ಹುಣಸಗಿ ಅವರು ಎಂ.ಎ, ಬಿ.ಎಡ್ ಪದವೀಧರರು. ಉತ್ತರ ಕನ್ನಡ ಜಿಲ್ಲೆಯ ಅರಬೈಲ್ ಗ್ರಾನಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ದ್ದಾರೆ. ಕಥೆ,ಕವನ,ಲಹರಿ,ಲೇಖನ, ಟಂಕಾ, ಹಾಯ್ಕುಗಳು, ರುಬಾಯಿ,ಗಝಲ್, ಪುಸ್ತಕ ವಿಮರ್ಶೆ, ಅಂಕಣ ರಹಗಳು, ಹಾಡುವುದು, ಓದುವುದು, ಚಿತ್ರಬಿಡಿಸುವುದು, ಉಪನ್ಯಾಸ, ನೃತ್ಯ, ರೇಡಿಯೋದಲ್ಲಿ ಸ್ವರಚಿತ ಕವನ ವಾಚನ, ಹಿರಿಯ ಸಾಹಿತಿ-ಕಲಾವಿದರ ಸಂದರ್ಶನ ನಡೆಸುವುದು, ಶಾಲಾ ಮಕ್ಕಳಿಗೆ ಅನುಕೂಲವಾಗುವ ಕಿರು ನಾಟಕಗಳು, ರೂಪಕಗಳು. ನಿರೂಪಣೆ.ಇತ್ಯಾದಿ ಇವರ ಹವ್ಯಾಸಗಳು. ಬೆಂಗಳೂರು, ಕಾರವಾರ, ಧಾರವಾಡ ಕೇಂದ್ರದಿಂದ ಹಲವು ಕಾರ್ಯಕ್ರಮಗಳನ್ನು ನೀಡಿದ್ದಾರೆ.  ಮಕ್ಕಳಿಗೆ ವಿಶೇಷವಾಗಿ ಬಾಂಧವ್ಯದ ಮೆರಗು ಅಂಕಣ ಪ್ರಕಟಗೊಳ್ಳುತ್ತಿದೆ. ಶಿಕ್ಷಕರ ಕಲ್ಯಾಣ ನಿಧಿಯಿಂದ ನಡೆಸುವ ರಾಜ್ಯ  ಮಟ್ಟದ ಭಾಷಣ ಸ್ಪರ್ಧೆಯಲ್ಲಿ ರಾಜ್ಯಕ್ಕೆ ದ್ವಿತೀಯ ಹಾಗೂ ಮೂರು ವಿಶ್ವವಿದ್ಯಾಲಯದ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಬಂಗಾರದ ಪದಕ ಪಡೆದಿದ್ದಾರೆ.

ಕೃತಿಗಳು:  ಬಿಚ್ಚಿಟ್ಟಮನ,ಬದುಕಂದ್ರೆ ಹೀಗೇನಾ? ಅವಳಿ (ಕವನ ಸಂಕಲನಗಳು), ಗೋರಿಯ ಸುತ್ತ ಸಪ್ತಪದಿ ತುಳಿದಾಗ (ಕಥಾ ಸಂಕಲನಗಳು), ಬೊಗಸೆಯೊಳಗಿನ ಆಕಾಶ (ಅಂಕಣ ಬರಹಗಳ ಸಂಗ್ರಹ ಕೃತಿ)

ಪ್ರಶಸ್ತಿ-ಪುರಸ್ಕಾರಗಳು:  ಅನುಪಮಾ ಸೇವಾ ಪುರಸ್ಕಾರ,  ಅಲ್ಲಮ ರಾಜ್ಯ ಪ್ರಶಸ್ತಿ, ಹೆಮ್ಮೆಯ ಕನ್ನಡಿಗ  ನಾಡೋಜ ದೇ ಜ ಗೌಡ ಪ್ರಶಸ್ತಿ, ಬೇಂದ್ರೆ ಕಾವ್ಯ ಪ್ರಶಸ್ತಿ, ಆದರ್ಶ ಶಿಕ್ಷಕಿ ಪ್ರಶಸ್ತಿ, ಕನ್ನಡ ರತ್ನ ರಾಜ್ಯ ಪ್ರಶಸ್ತಿ, ಯುಗದರ್ಶಿನಿ ರಾಜ್ಯ ಪ್ರಶಸ್ತಿ ಲಭಿಸಿವೆ. .

 

ಶಿವಲೀಲಾ ಹುಣಸಗಿ