About the Author

ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಕರ್ನಾಟಕದ ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಪೀಠಾಧಿಕಾರಿಗಳು. ಒಂದು ಧಾರ್ಮಿಕ ಪೀಠದ ಸಮಸ್ತ ಕಾರ್ಯಚಟುವಟಿಕೆಗಳ ಸುಸೂತ್ರ ನಿರ್ವಹಣೆಗೆ ಆಧುನಿಕ ಕಂಪ್ಯೂಟರ್ ತಂತ್ರಜ್ಞಾನವನ್ನು ಭಾರತ ದೇಶದಲ್ಲಿಯೇ ಮೊಟ್ಟಮೊದಲ ಬಾರಿಗೆ ಅಳವಸಿಕೊಂಡು, ಇಂದಿಗೂ ಅದನ್ನು ಯಶಸ್ವಿಯಾಗಿ ಬಳಸಿಕೊಳ್ಳುತ್ತಿರುವ ಕೀರ್ತಿಗೆ ಪಾತ್ರರಾಗಿದ್ದಾರೆ. ಭಾರತೀಯ ಪರಂಪರೆಯಿಂದ ಬಂದ ಸಾಂಪ್ರದಾಯಿಕ ಜ್ಞಾನ ಮತ್ತು ಪಾಶ್ಚಿಮಾತ್ಯ ಆಧುನಿಕ ತಂತ್ರಜ್ಞಾನ ಎರಡನ್ನೂ ವಿಶಿಷ್ಟ ರೀತಿಯಲ್ಲಿ ಬೆರೆಸಿ ಹದಗೊಳಿಸಿಕೊಂಡು ಬಳಸುತ್ತಿರುವ ಇವರ ಸಾಧನೆಗಳು ಹಲವಾರು. ಸಂಸ್ಕೃತ ವ್ಯಾಕರಣ ಕುರಿತು ಆಧುನಿಕ ರೀತಿಯಲ್ಲಿ ಅಧ್ಯಯನ ನಡೆಸಲು ಅನುವುಮಾಡಿಕೊಡುವ ಇವರ ‘ಗಣಕಾಷ್ಟಾಧ್ಯಾಯಿ’ ತಂತ್ರಾಂಶ ಮತ್ತು ವಚನ ಸಾಹಿತ್ಯದ ಸೊಗಡನ್ನು ವಿಶ್ವದೆಲ್ಲೆಡೆ ಪ್ರಸರಿಸುತ್ತಿರುವ ‘ಗಣಕ ವಚನ ಸಂಪುಟ’ ಇವರ ಕಂಪ್ಯೂಟರ್ ಯೋಜನೆಗಳಲ್ಲಿ ಪ್ರಮುಖವಾದವುಗಳು.

ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ