About the Author

ಶಿವಾನಂದ ಕಲಬುರಗಿ ಕನ್ನಡ ಉಪನ್ಯಾಸಕರು. ಯಾದಗಿರಿ ಜಿಲ್ಲೆಯ ಯಾದಗಿರಿಯಲ್ಲಿ ಪದವಿಯವರೆಗೂ ಶಿಕ್ಷಣ ಪೂರೈಸಿದ್ದಾರೆ. ಬೆಂಗಳೂರಿನಲ್ಲಿ ಬಿ.ಇಡಿ ಪೂರ್ಣಗೊಳಿಸಿದ್ದು, ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ. ಪಡೆದಿದ್ದು, ಸದ್ಯ, ಸಂಶೋಧನಾ ವಿದ್ಯಾರ್ಥಿಯಾಗಿದ್ದಾರೆ.  `ಕಾವ್ಯಪ್ರಿಯ ಶಿವು' ಎಂಬುದು ಇವರ ಕಾವ್ಯನಾಮ. 

ಕೃತಿಗಳು: ಹಲವು ನುಡಿಗಳ ನಡಿಗೆ (ವಿಮರ್ಶೆ ಕೃತಿ),  ಅಂತರಂಗ (ಕವನ ಸಂಕಲನ),  ನೆತ್ತರಾಸಿದ ನೆಲ (ಕವನ ಸಂಕಲನ), ಬೆಂದ ಬೇರು ನೊಂದ ಚಿಗುರು( ಕವನ ಸಂಕಲನ), ಹಸಿವು ತಣಿಸಿದವಳು( ಕಥಾ ಸಂಕಲನ), ಸಾಹಿತ್ಯ ಚೇತನ (ವಿಮರ್ಶೆ ಕೃತಿ), ಯುಜಿಸಿ ನಡೆಸುವ ಎನ್ ಇ.ಟಿ. ಪರೀಕ್ಷೆಗಳ ಪ್ರಶ್ನೋತ್ತರ ಕೋಶ-2021, ಕನ್ನಡ ಸಾಹಿತ್ಯ ಪ್ರಶ್ನೋತ್ತರ ಕೋಶ-2021, 

ಶಿವಾನಂದ ಕಲಬುರಗಿ

(01 May 1982)