About the Author

ಶಹಾಪುರದ ಅಡತಿ ಅಂಗಡಿವೊಂದರಲ್ಲಿ ಗುಮಾಸ್ತರಾದ ಶಿವಣ್ಣ ಇಜೇರಿ ಅವರು ಸಾಹಿತ್ಯಾಸಕ್ತರು. ವಚನ ಸಾಹಿತ್ಯ ತತ್ವ ಅನುಯಾಯಿ. ಉಡಿಯಲ್ಲಿಯ ಉರಿ, ಆಧುನಿಕ ವಚನಗಳು , ಕರಗದ ಬೆಣ್ಣೆ ಹೀಗೆ 5 ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಶರಣರ ವಚನಗಳ ವಿಶ್ಲೇಷಕರು. ’ಬಸವ ಮಾರ್ಗ’ ಮಾಸಿಕದಲ್ಲಿ ಲೇಖಕರು. ಶರಣರ ವಿಚಾರ ಪ್ರಸಾರ-ಪ್ರಚಾರಕ್ಕಾಗಿ ಹಿರಿಯ ಸಾಹಿತಿ ದಿ.ಲಿಂಗಣ್ಣ ಸತ್ಯಂಪೇಟೆ ಅವರು ಬಸವ ಮಾರ್ಗ ಪ್ರತಿಷ್ಠಾನದಿಂದ ಆರಂಭಿಸಿದ”ಮನೆಯಲ್ಲಿ ಮಹಾಮನೆ’ ಚಿಂತನಾ ಚಟುವಟಿಕೆಯನ್ನು ಮುಂದುವರಿಸಿಕೊಂಡು ಬರುತ್ತಿದ್ದಾರೆ.

ಶಿವಣ್ಣ ಇಜೇರಿ

(13 May 1952)