About the Author

ಶೋಭಾ ಹರಿಪ್ರಸಾದ್‌ ಮೂಲತಃ ಸಾಲಿಕೇರಿಯವರು. ತಾಯಿ ಲಲಿತಾ ಶೆಟ್ಟಿಗಾರ್ ತಂದೆ ನಾರಾಯಣ ಶೆಟ್ಟಿಗಾರ್. ಪ್ರಾಥಮಿಕ ವಿದ್ಯಾಭ್ಯಾಸವನ್ನು ವಿದ್ಯಾಮಂದಿರದ  ಹಿರಿಯ ಪ್ರಾಥಮಿಕ ಶಾಲೆ ಹಾರಾಡಿಯಲ್ಲಿ  ಪೂರ್ಣಗೊಳಿಸಿ  ಹೈಸ್ಕೂಲ್ ಮತ್ತು ಬಿ. ಎ ಪದವಿಯನ್ನು ಎಸ್ ಎಮ್ ಎಸ್ ಬ್ರಹ್ಮಾವರ ಕಾಲೇಜಿನಲ್ಲಿ ಪೂರ್ಣ ಗೊಳಿಸಿದರು.  ಮಂಗಳೂರಿನ‌ ಸರಕಾರಿ ಕಾಲೇಜಿನಲ್ಲಿ  ಬಿ.‌ಎಡ್. ಅನ್ನು ಪೂರ್ಣಗೊಳಿಸಿದ ಅವರು  ಸಾಹಿತ್ಯ ಕ್ಷೇತ್ರದಲ್ಲಿ ನಾಲ್ಕು ವರ್ಷದಿಂದ ತೊಡಗಿಸಿ ಕೊಂಡಿದ್ದಾರೆ. ಇವರು ಮೊದಲು ಬರೆದದ್ದು ಬೆರಳೆಣಿಕೆಯಷ್ಟು ಹನಿಗವನ ಮತ್ತು ಕತೆ. ರಾಜ್ಯ ಕವಿ ವೃಕ್ಷ  ಪ್ರಶಸ್ತಿ, ವ್ಯಾಕರಣ ಚೂಡಾಮಣಿ ಪ್ರಶಸ್ತಿ ಅವರಿಗೆ ದೊರೆತ ಪ್ರಶಸ್ತಿಗಳಾಗಿವೆ. 

ಕೃತಿಗಳು  : ಚಿಣ್ಣರ ಕನಸಿನ ಬಣ್ಣದ ಲೋಕ ,ಬೇವು ಬೆಲ್ಲ, ಸುಬ್ಬಕನ ವಚನಗಳು, ಬಿಂಕದ ಸಿಂಗಾರಿ, ಅಂತರಾಳ, ಭೂಮಿಪುಟ್ಟಿ, ಭಾವಕಸ್ತೂರಿ. 

 

ಶೋಭಾ ಹರಿಪ್ರಸಾದ್‌