About the Author

ಪತ್ರಕರ್ತ, ಲೇಖಕ ಶ್ರೀಕಾಂತ ಶೆಟ್ಟಿ ಕಾರ್ಕಳ ಅವರು ಮೂಲತಃ ಕಾರ್ಕಳದ ಎಣ್ಣೆಹೊಳೆಯವರು. ಪ್ರಾಥಮಿಕ ಶಿಕ್ಷಣವನ್ನು ತಮ್ಮ ಹುಟ್ಟೂರಲ್ಲಿ ಮುಗಿಸಿ ಬಳಿಕ ಮುಂಬೈ ಸೇರಿ ರಾತ್ರಿ ಶಾಲೆಯಲ್ಲಿ ಶಿಕ್ಷಣ ಮುಂದುವರೆಸಿ, ಡಿಪ್ಲೊಮಾ ಪೂರೈಸಿದರು. ಕಳೆದ ಹತ್ತು ವರ್ಷದಿಂದ ಪತ್ರಿಕೋದ್ಯಮದಲ್ಲಿ ಕೆಲಸ ನಿರ್ವಹಿಸಿರುವ ಅವರ ಅಂಕಣಗಳು ಕನ್ನಡದ ದಿನ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಪ್ರಸ್ತುತ ದಿಗ್ವಿಜಯ ಟಿವಿ ಉಡುಪಿ ಜಿಲ್ಲಾ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಶ್ರೀಕಾಂತ ಶೆಟ್ಟಿ ಕಾರ್ಕಳ