About the Author

ಲೇಖಕಿ ಶುಭಾ ಎ. ಆರ್. ಅವರು ಮೂಲತಃ ಬೆಂಗಳೂರಿನವರು. ಸರ್ಕಾರಿ ಪ್ರೌಢಶಾಲೆಯಲ್ಲಿ ಗಣಿತ ವಿಜ್ಞಾನ ಶಿಕ್ಷಕಿ. ವಿಜ್ಞಾನ ಪಠ್ಯಪುಸ್ತಕವೂ ಸೇರಿದಂತೆ ಶಿಕ್ಷಣ ಇಲಾಖೆಯಲ್ಲಿ ಹಲವಾರು ಪುಸ್ತಕಗಳ ರಚನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಮಕ್ಕಳಿಗಾಗಿ ‘ಧರೆಯನುಳಿಸುವ ಬನ್ನಿರಿ’ ಎಂಬ ವೈಜ್ಞಾನಿಕ ನಾಟಕ, ‘ತುಂಡು ಭೂಮಿ- ತುಣುಕು ಆಕಾಶ’,(ಕಥಾ ಸಂಕಲನ), ‘ತುಟಿ ಬೇಲಿ ದಾಟಿದ ನಗು’ (ಕವನ ಸಂಕಲನ) ಮುಂತಾದ ಕೃತಿಗಳನ್ನು ರಚಿಸಿದ್ದಾರೆ.

ಶುಭಾ ಎ. ಆರ್.